ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 
ರಾಜಕೀಯ

ಸಂತೋಷ್ ಆತ್ಮಹತ್ಯೆ ಯತ್ನಕ್ಕೆ 'ಪರ್ಸನಲ್ ವಿಡಿಯೋ' ಕಾರಣ: ಡಿ.ಕೆ. ಶಿವಕುಮಾರ್

ಪರ್ಸನಲ್ ವಿಡಿಯೋವೊಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. 

ಕಾರವಾರ; ಪರ್ಸನಲ್ ವಿಡಿಯೋವೊಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಅವರು ಯಾರದ್ದೋ ವೈಯಕ್ತಿಕ ವಿಡಿಯೋವೊಂದನ್ನು ವಿಧಾನಪರಿಷತ್ ಸದಸ್ಯರಿಗೆ ಹಾಗೂ ಸಚಿವರಿಗೆ ಕೊಟ್ಟಿದ್ದ ಮಾಹಿತಿ 2-3 ತಿಂಗಳ ಹಿಂದೆ ಬಂದಿತ್ತು. ಇದನ್ನು ಮುಂದಿಟ್ಟುಕೊಂಡು ವಿಧಾನಪರಿಷತ್ ಸದಸ್ಯರು, ಸಚಿವರಿಬ್ಬರೂ ಸೇರಿ ಮುಖ್ಯಮಂತ್ರಿ ಹಾಗೂ ಸಂತೋಷ್ ಇಬ್ಬರಿಗೂ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರೆಂದು ಕೇಳಿದ್ದೆ. ಅದರ ಸತ್ಯಾಂಶಗಳೇನೆಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ. 

ವಿಡಿಯೋದಲ್ಲಿ ಗುಪ್ತ ಮಾಹಿತಿಯೇನೋ ಅಡಗಿದೆ. ಮುಖ್ಯಮಂತ್ರಿಗಳ ಕಾರ್ಯದರ್ಶಿ ಆತ್ಮಹತ್ಯೆಗೆ ಯತ್ನಿಸುವುದು ಸಾಮಾನ್ಯ ವಿಚಾರವಲ್ಲ. ಹಾಗಾಗಿ ಈ ಕುರಿತು ತನಿಖೆಯಾಗಬೇಕಿದೆ. ಸತ್ಯಾಂಶ ಏನಿದೆ ಎಂಬುದರ ಬಗ್ಗೆ ತನಿಖೆಯಾಗಬೇಕು. ಆದರೆ, ಈ ತನಿಖೆಯು ರಾಜ್ಯ ಸರ್ಕಾರದಿಂದ ಆಗಬಾರದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | 'ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ಪತ್ರಿಕಾಗೋಷ್ಠಿ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

SCROLL FOR NEXT