ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 
ರಾಜಕೀಯ

ಸಂತೋಷ್ ಆತ್ಮಹತ್ಯೆ ಯತ್ನಕ್ಕೆ 'ಪರ್ಸನಲ್ ವಿಡಿಯೋ' ಕಾರಣ: ಡಿ.ಕೆ. ಶಿವಕುಮಾರ್

ಪರ್ಸನಲ್ ವಿಡಿಯೋವೊಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. 

ಕಾರವಾರ; ಪರ್ಸನಲ್ ವಿಡಿಯೋವೊಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಅವರು ಯಾರದ್ದೋ ವೈಯಕ್ತಿಕ ವಿಡಿಯೋವೊಂದನ್ನು ವಿಧಾನಪರಿಷತ್ ಸದಸ್ಯರಿಗೆ ಹಾಗೂ ಸಚಿವರಿಗೆ ಕೊಟ್ಟಿದ್ದ ಮಾಹಿತಿ 2-3 ತಿಂಗಳ ಹಿಂದೆ ಬಂದಿತ್ತು. ಇದನ್ನು ಮುಂದಿಟ್ಟುಕೊಂಡು ವಿಧಾನಪರಿಷತ್ ಸದಸ್ಯರು, ಸಚಿವರಿಬ್ಬರೂ ಸೇರಿ ಮುಖ್ಯಮಂತ್ರಿ ಹಾಗೂ ಸಂತೋಷ್ ಇಬ್ಬರಿಗೂ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರೆಂದು ಕೇಳಿದ್ದೆ. ಅದರ ಸತ್ಯಾಂಶಗಳೇನೆಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ. 

ವಿಡಿಯೋದಲ್ಲಿ ಗುಪ್ತ ಮಾಹಿತಿಯೇನೋ ಅಡಗಿದೆ. ಮುಖ್ಯಮಂತ್ರಿಗಳ ಕಾರ್ಯದರ್ಶಿ ಆತ್ಮಹತ್ಯೆಗೆ ಯತ್ನಿಸುವುದು ಸಾಮಾನ್ಯ ವಿಚಾರವಲ್ಲ. ಹಾಗಾಗಿ ಈ ಕುರಿತು ತನಿಖೆಯಾಗಬೇಕಿದೆ. ಸತ್ಯಾಂಶ ಏನಿದೆ ಎಂಬುದರ ಬಗ್ಗೆ ತನಿಖೆಯಾಗಬೇಕು. ಆದರೆ, ಈ ತನಿಖೆಯು ರಾಜ್ಯ ಸರ್ಕಾರದಿಂದ ಆಗಬಾರದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3,260 ನಕಲಿ ಪಕ್ಷಗಳ ಮೂಲಕ 10,000 ಕೋಟಿ ಕಪ್ಪುಹಣ ಅಕ್ರಮ ವರ್ಗಾವಣೆ; ಬಿಜೆಪಿಯ 'ಸಿ' ಟೀಮ್: ಕಾಂಗ್ರೆಸ್ ಆರೋಪ!

'ಚಿಂತೆ ಮಾಡುತ್ತ ಕೂರಬೇಡಿ'; ಟಾಕ್ಸಿಕ್ ಸೋಲು ಒಪ್ಪಿಕೊಂಡ ಯಶ್‌: ಆಪ್ತನ ಬಳಿ ರಾಕಿಂಗ್ ಸ್ಟಾರ್ ಹೇಳಿದ್ದೇನು?

Duleep Trophy: 'ತಗೋ... ತಗೋ..ಮೊದ್ಲು DRS ತಗೋ'.. ನಾಯಕ ಇಶಾನ್ ಕಿಶನ್ ಗೆ ದುಂಬಾಲು ಬಿದ್ದ 'ಸೂಪರ್ ಡೆಪ್ಯುಟಿ' Vaibhav Sooryavanshi, ಆಗಿದ್ದೇನು? Video

5 ರಾಜ್ಯಗಳ ಚುನಾವಣೆ: ರಾಜಕೀಯ ಪಕ್ಷಗಳ ಖರ್ಚು- ದೇಣಿಗೆ ಮಾಹಿತಿ ಬಹಿರಂಗ; ಆಡಳಿತಾರೂಢ ಬಿಜೆಪಿಗೆ ಬಂದಿದ್ದೆಷ್ಟು?

ಈ ದಶಕದ ಅಂತ್ಯಕ್ಕೆ AI ನಮ್ಮನ್ನೆಲ್ಲಾ ಕೊಲ್ಲುತ್ತೆ: Anthropic ಸಂಶೋಧಕನ ರಾಜೀನಾಮೆ; ಸುರಕ್ಷತಾ ಕಾರ್ಯನಿರ್ವಾಹಕರಿಂದಲೂ ಬೆಂಬಲ!