ನಳಿನ್ ಕುಮಾರ್ ಕಟೀಲ್ 
ರಾಜಕೀಯ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಿಲ್ಲ: ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ

ಇದೂವರೆಗೂ ಮುಖ್ಯಮಂತ್ರಿಗಳ ಬದಲಾವಣೆ ಕುರಿತು ಯಾವುದೇ ಚರ್ಚೆಗಳೂ ನಡೆದಿಲ್ಲ. ಯಾರೊಬ್ಬರು ನಾಯಕತ್ವ ಬದಲಾವಣೆ ಕುರಿತು ಪ್ರಶ್ನೆಯನ್ನೇ ಎತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ.

ಮಂಗಳೂರು: ಇದೂವರೆಗೂ ಮುಖ್ಯಮಂತ್ರಿಗಳ ಬದಲಾವಣೆ ಕುರಿತು ಯಾವುದೇ ಚರ್ಚೆಗಳೂ ನಡೆದಿಲ್ಲ. ಯಾರೊಬ್ಬರು ನಾಯಕತ್ವ ಬದಲಾವಣೆ ಕುರಿತು ಪ್ರಶ್ನೆಯನ್ನೇ ಎತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ. 

ಪಕ್ಷದ ರಾಷ್ಟ್ರಾಧ್ಯಕ್ಷರು ಹಾಗೂ ಕೋರ್ ಕಮಿತಿ ಸಭೆಯ ವೇಳೆ ಪಕ್ಷದ ನಾಯಕರು ನಾಯಕತ್ವ ಬದಲಾವಣೆ ಕುರಿತು ಏನಾದರೂ ಹೇಳಿದರೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಇದೂವರೆಗೂ ಮುಖ್ಯಮಂತ್ರಿಗಳ ಬದಲಾವಣೆ ಕುರಿತು ಯಾವುದೇ ಚರ್ಚೆಗಳೂ ನಡೆದಿಲ್ಲ. ಯಾವ ಹಂತದಲ್ಲ ಈ ಬಗ್ಗೆ ಚರ್ಚೆಯಾಗಿದೆ ಹೇಳಿ ಎಂದು ಪ್ರಶ್ನಿಸಿದ್ದಾರೆ. 

ಇದೇ ವೇಳೆ ಸಚಿವ ಸ್ಥಾನಕ್ಕಾಗಿ ನಾಯಕರು ಲಾಬಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿ, ಸಚಿವ ಸ್ಥಾನದ ಕುರಿತು ಮುಖ್ಯಮಂತ್ರಿ ಮತ್ತು ವರಿಷ್ಠರ ತೀರ್ಮಾನಕ್ಕೆ ಎಲ್ಲ ಶಾಸಕರು ಬದ್ಧರಾಗಿರಬೇಕು. ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ವರಿಷ್ಠರ ತೀರ್ಮಾನಕ್ಕೆ ಬದ್ಧರಾಗಿ ನಡೆಯಬೇಕು. ಈ ವಿಚಾರವಾಗಿ ಬಿಜೆಪಿಯಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಹೇಳಿದ್ದಾರೆ. 

ಮಂಗಳೂರಿನ ಅಪಾರ್ಟ್'ಮೆಂಟ್ ಗೋಡೆಯ ಮೇಲೆ ದೇಶವಿರೋಧ ಕೃತ್ಯವನ್ನು ಯಾರೇ ಮಾಡಿದ್ದರೂ ಕಠಿಣ ಕ್ರಮ ನಿಶ್ಚಿತ. ಇದನ್ನು ಯಾರು ಮಾಡಿದ್ದಾರೆ, ಯಾವುದೇ ಶಕ್ತಿ ಇದ್ದರು ಬಂಧಿಸುತ್ತೇವೆಂದು ತಿಳಿಸಿದ್ದಾರೆ. 

ಲಿಂಗಾಯರಿಗೆ ಮೀಸಲಾತಿ ನೀಡಲು ಜಯಮೃತ್ಯುಂಜಯ ಸ್ವಾಮೀಡಿ ಗಡುವು ವಿಧಿಸಿದ ಕುರಿತು ಪ್ರತಿಕ್ರಿಯೆ ನೀಡಿ,ಈ ಸಮಸ್ಯೆ ನಿನ್ನೆಯೇ ಬಗೆಹರಿದಿದೆ. ಮುಖ್ಯಮಂತ್ರಿ ಸ್ಪಷ್ಟನೆ ನೀಡಿದ್ದಾರೆಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT