ರಾಜಕೀಯ

2-3 ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದೆ: ಸಿಎಂ ಯಡಿಯೂರಪ್ಪ

Manjula VN

ಚಿತ್ರದುರ್ಗ: ಸಂಪುಟ ವಿಸ್ತರಣೆ ಕುರಿತು ಯಾವುದೇ ಗೊಂದಲಗಳಿಲ್ಲ. ಇನ್ನೂ 2-3 ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಸ್ತರಣೆ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಎಲ್ಲವೂ ಸರಿ ಹೋಗುತ್ತದೆ. ವಿಸ್ತರಣೆ ಕುರಿತು ಸಾಧ್ಯವಾದಲ್ಲಿ ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ. ಪಟ್ಟಿ ಬೇಗ ಕ್ಲಿಯರ್ ಮಾಡಿಕೊಡುವಂತೆ ಮನವಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. 

ಯಾರು ಯಾರು ಸಚಿವರಾಗುತ್ತಾರೆಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತಿದ್ದಾರೆಂದ ಅವರು ಪಕ್ಷ ಅಧಿಕಾರಕ್ಕೆ ಬರುವ ಸಲುವಾತಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳನ್ನು ತೊರೆದು ಬಂದಿದ್ದ ಬಂಡಾಯ ನಾಯಕರಿಗೆ ಸಚಿವ ಸ್ಥಾನ ನೀಡಲಿದ್ದಾರೆಯೇ ಎಂಬ ಪ್ರಶ್ನೆಗ ಉತ್ತರಿಸಲು ನಿರಾಕರಿಸಿದ್ದಾರೆ. 

SCROLL FOR NEXT