ಬೈರತಿ ಬಸವರಾಜ್ 
ರಾಜಕೀಯ

ಗ್ರಾಪಂ ಚುನಾವಣೆ ಫಲಿತಾಂಶ ಬರುವವರೆಗೂ ಸಚಿವಾಕಾಂಕ್ಷಿಗಳು ಕಾಯಲೇಬೇಕು: ಬೈರತಿ ಬಸವರಾಜ್

ಗ್ರಾ.ಪಂ. ಚುನಾವಣೆ ಎದುರಿಸಲು ಬಿಜೆಪಿ ಸಿದ್ಧವಾಗಿದೆ. ಚುನಾವಣೆ ಶಾಂತಿಯುತವಾಗಿ ನಡೆಯಲು ಎಲ್ಲಾ ಕ್ರಮಕೈಗೊಳ್ಳಲಾಗಿದ್ದು, ಎಲ್ಲಾ ಸಚಿವರಿಗೂ ಚುನಾವಣಾ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಹೇಳಿದ್ದಾರೆ.

ಬೆಂಗಳೂರು: ಗ್ರಾ.ಪಂ. ಚುನಾವಣೆ ಎದುರಿಸಲು ಬಿಜೆಪಿ ಸಿದ್ಧವಾಗಿದೆ. ಚುನಾವಣೆ ಶಾಂತಿಯುತವಾಗಿ ನಡೆಯಲು ಎಲ್ಲಾ ಕ್ರಮಕೈಗೊಳ್ಳಲಾಗಿದ್ದು, ಎಲ್ಲಾ ಸಚಿವರಿಗೂ ಚುನಾವಣಾ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾ.ಪಂ. ಚುನಾವಣೆ ಮುಂದೂಡಲು ಸರ್ಕಾರವೇನೂ ಪ್ರಯತ್ನಿಸಿರಲಿಲ್ಲ. ಕೊರೋನಾ ಕಾರಣಕ್ಕಾಗಿ ಮುಂದೂಡಲು ಚಿಂತನೆ ನಡೆಸಿತ್ತಷ್ಟೆ. ಈಗ ಚುನಾವಣಾ ಆಯೋಗ ಚುನಾವಣೆ ಘೋಷಿಸಿದ್ದು, ಆಯೋಗದ ತೀರ್ಮಾನಕ್ಕೆ ಬದ್ಧರಾಗಬೇಕಾಗುತ್ತದೆ ಎಂದರು.

ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗಿರುವುದರಿಂದ ಸಂಪುಟ ವಿಸ್ತರಣೆ ಅಥವಾ ಪುನರಾಚನೆ ಮುಂದಕ್ಕೆ ಹೋಗುವುದು ಸಹಜ. ಚುನಾವಣೆ ಫಲಿತಾಂಶ ಬರುವವರೆಗೂ ಸಚಿವಾಕಾಂಕ್ಷಿಗಳು ಕಾಯಲೇಬೇಕಾಗುತ್ತದೆ. ಏನೂ ಮಾಡಲು ಆಗುವುದಿಲ್ಲ ಎಂದು ಬೈರತಿ ಹೇಳಿದರು.

ಈ ಮಧ್ಯೆ, ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಗೂ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ. ಇನ್ನು ಎರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗುತ್ತೇನೋ ನೋಡೋಣ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT