ಡಿಕೆ ಶಿವಕುಮಾರ್ 
ರಾಜಕೀಯ

ಸುರೇಶ್ ಅಂಗಡಿ ಕೇಂದ್ರ ಸಚಿವರಾಗಿದ್ದರೂ ಬೆಳಗಾವಿಗೆ ತಂದು ಗೌರವ ಸಲ್ಲಿಸಲು ಸರ್ಕಾರಕ್ಕೆ ಸಾಧ್ಯವಾಗಲಿಲ್ಲ: ಡಿಕೆ.ಶಿವಕುಮಾರ್

ಸುರೇಶ್ ಅಂಗಡಿಯವರು ಕೇಂದ್ರದಲ್ಲಿ ಸಚಿವರಾಗಿದ್ದರು. ಅಲ್ಲದೇ, ಬೆಳಗಾವಿಯಲ್ಲಿ ಮಿಲಿಟರ್ ಬೇಸ್ ಇದ್ದರೂ ಪಾರ್ಥೀವ ಶರೀರವನ್ನು ಬೆಳಗಾವಿಗೆ ತಂದು ಗೌರವ ಸಲ್ಲಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸಾಧ್ಯವಾಗಲಿಲ್ಲ ಎಂದು ಡಿ.ಕೆ.ಶಿವಕುಮಾರ್ ಅವರು ಟೀಕಿಸಿದ್ದಾರೆ. 

ಬೆಳಗಾವಿ: ಸುರೇಶ್ ಅಂಗಡಿಯವರು ಕೇಂದ್ರದಲ್ಲಿ ಸಚಿವರಾಗಿದ್ದರು. ಅಲ್ಲದೇ, ಬೆಳಗಾವಿಯಲ್ಲಿ ಮಿಲಿಟರ್ ಬೇಸ್ ಇದ್ದರೂ ಪಾರ್ಥೀವ ಶರೀರವನ್ನು ಬೆಳಗಾವಿಗೆ ತಂದು ಗೌರವ ಸಲ್ಲಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸಾಧ್ಯವಾಗಲಿಲ್ಲ ಎಂದು ಡಿ.ಕೆ.ಶಿವಕುಮಾರ್ ಅವರು ಟೀಕಿಸಿದ್ದಾರೆ. 

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸುರೇಶ್ ಅಂಗಡಿಯವರ ಪಾರ್ಥಿವ ಶರೀರ ಬೆಳಗಾವಿಗೆ ತರಬೇಕಿತ್ತು. ಬೆಳಗಾವಿಯಲ್ಲಿ ಅಂತಿಮ ದರ್ಶನಕ್ಕೆ ಕ್ಷೇತ್ರದ ಜನರಿಗೆ ಅವಕಾಶ ಕೊಡಬಹುದಾಗಿತ್ತು. 2 ತಿಂಗಳ ಹಿಂದೆ ಸಾಕಷ್ಟು ರಾಜಕಾರಣ ನಡೆಯಿತು ಎಂದು ಕುಟುಂಬದ ಸದಸ್ಯರು ಹೇಳಿದ್ದಾರೆ. ಆದರೆ ಈ ಸಂದರ್ಭದಲ್ಲಿ ನೊಂದ ಕುಟುಂಬಕ್ಕೆ ಸರ್ಕಾರ ನ್ಯಾಯ ಒದಗಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. 

ಸುರೇಶ್ ಅಂಗಡಿ ಕೇಂದ್ರದ ಮಂತ್ರಿ. ಅಲ್ಲದೇ ಬೆಳಗಾವಿಯಲ್ಲಿ ಮಿಲಿಟರಿ ಬೇಸ್ ಇದೆ. ಆದರೂ ಅವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ತಂದು ಗೌರವ ಸಲ್ಲಿಸಲು ಕೇಂದ್ರ, ರಾಜ್ಯ ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದು ಕಿಡಿಕಾರಿದ್ದಾರೆ. 

ಇದೇ ವೇಳೆ ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ ಕುರಿತು ಮಾತನಾಡಿದ ಅವರು, ಯೋಗಿ ಆದಿತ್ಯನಾಥ್ ಸರ್ಕಾರ ಇಡೀ ದೇಶಕ್ಕೆ ರೋಗ ತಂದು ಕೊಡಲಿದೆ. ಯೋಗಿ ಆದಿತ್ಯನಾಥ್ ಸರ್ಕಾರ ಇಡೀ ನಮ್ಮ ದೇಶದ ಗೌರವ, ಸ್ವಾಭಿಮಾನ, ಸಮುದಾಯ ಎಲ್ಲರಿಗೂ ಇಡೀ ಪ್ರಪಂಚಕ್ಕೆ ಭಾರತದ ಬಗ್ಗೆ ಕಪ್ಪು ಚುಕ್ಕೆ. ಇಡೀ ಮನುಕುಲಕ್ಕೆ ಅವಮಾನವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

SCROLL FOR NEXT