ಚೌಡರೆಡ್ಡಿ ಪ್ರಚಾರ 
ರಾಜಕೀಯ

ರಂಗೇರುತ್ತಿದೆ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ನಾಲ್ಕು ಅಭ್ಯರ್ಥಿಗಳ ಪ್ರಬಲ ಪೈಪೋಟಿ

ವಿಧಾನ ಪರಿಷತ್ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಗ್ನೇಯ ಪದವೀಧರ ಕ್ಷೇತ್ರಕ್ಕೆ ನಾಲ್ಕು ಅಭ್ಯರ್ಥಿಗಳು ಕಣಕ್ಕಿಳಿಯುವ ಸಾಧ್ಯತೆಯಿದೆ.

ಚಿತ್ರದುರ್ಗ/ ದಾವಣಗೆರೆ: ವಿಧಾನ ಪರಿಷತ್ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಗ್ನೇಯ ಪದವೀಧರ ಕ್ಷೇತ್ರಕ್ಕೆ ನಾಲ್ಕು ಅಭ್ಯರ್ಥಿಗಳು ಕಣಕ್ಕಿಳಿಯುವ ಸಾಧ್ಯತೆಯಿದೆ.

ಜೆಡಿಎಸ್ ಗೆಲ್ಲುವ ಅಭ್ಯರ್ಥಿಯನ್ನು ಕಣಕ್ಕಿಳಿಸಿಲು ಸಿದ್ಧತೆ ನಡೆಸುತ್ತಿದೆ, ಕಳೆದ ಬಾರಿ ಬಿಜೆಪಿಯ ಡಾ.ಶಿವಯೋಗಿಸ್ವಾಮಿ ಅವರನ್ನು ಉತ್ತಮ ಅಂತರದಿಂದ ಸೋಲಿಸಿದ್ದ ಚೌಡರೆಡ್ಡಿ ತೋಪಳ್ಳಿ ಅವರನ್ನು ಕಣಕ್ಕಿಳಿಸಲಿದೆ, ಶಿಕ್ಷಕರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಕಾಂಗ್ರೆಸ್ ನ ರಮೇಶ್ ಬಾಬು ಅಭ್ಯರ್ಥಿಯಾಗುವ ಸಾಧ್ಯತೆಯಿದೆ.

ಬಿಜೆಪಿ ಹಿರಿಯೂರು ಶಾಸಕಿ ಪೂರ್ಣಿಮಾ ಅವರ ಪತಿ ಶ್ರೀನಿವಾಸ್ ರನ್ನು ಕೈಬಿಟ್ಟು ಚಿದಾನಂದಗೌಡ ಅವರಿಗೆ ಮಣೆ ಹಾಕಿದೆ, ಹೀಗಾಗಿ ಆಕ್ರೋಶಗೊಂಡಿರುವ ಶ್ರೀನಿವಾಸ್ ಸ್ವತಂತ್ರ್ಯವಾಗಿ ಸ್ಪರ್ಧಿಸುವ ಸಾಧ್ಯತೆಯಿದೆ.

ಅಭ್ಯರ್ಥಿಗಳು ಈಗಾಗಲೇ ಕ್ಷೇತ್ರಗಳಾದ್ಯಂತ ಸಂಚರಿಸುತ್ತಿದ್ದು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ-ಹರಿಹರದಲ್ಲಿ ಪ್ರಚಾರ ಮಾಡುತ್ತಿದ್ದಾರೆ.

ಅಕ್ಟೋಬರ್ 8 ರಂದು ಚೌಡರೆಡ್ಡಿ ಮತ್ತು ಅಕ್ಟೋಬರ್ 7 ರಂದು ಶ್ರೀನಿವಾಸ್ ನಾಮಪತ್ರ ಸಲ್ಲಿಸಲಿದ್ದಾರೆ.  ಆದರೆ ಕಾಂಗ್ರೆಸ್ ಅಧಿಕೃತವಾಗಿ ರಮೇಶ್ ಬಾಬು ಅವರ ಹೆಸರನ್ನು ಪ್ರಕಟಿಸಿಲ್ಲ.

ತಮ್ಮ ಆರು ವರ್ಷದ ಅವಧಿಯಲ್ಲಿ ಶಿಕ್ಷಕರ, ಉಪನ್ಯಾಸಕರ ಮತ್ತು ಪದವೀದರರ ಕಲ್ಯಾಣಕ್ಕಾಗಿ ಕೆಲಸ ಮಾಡಿದ್ದೇನೆ,ವೇತನ, ಬಡ್ತಿ, ಹೊಸ ಪಿಂಚಣಿ ಹಾಗೂ ಪದವೀದರರ ಸಬಲೀಕರಣ ಸೇರಿದಂತೆ ಹಲವು ವಿಷಯಗಳ ಬಗ್ಗೆ ಹೋರಾಟ ನಡೆಸಿದ್ದೇನೆ ಎಂದು ಚೌಡರೆಡ್ಡಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT