ರಾಜಕೀಯ

ಪವಿತ್ರ ಸ್ನೇಹವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವುದು ಸಿದ್ದರಾಮಯ್ಯಗೆ ಅಂಟುಜಾಡ್ಯ: ಕುಮಾರಸ್ವಾಮಿ

Vishwanath S

ಬೆಂಗಳೂರು: ತಮಗೂ ಪಕ್ಷಾತೀತವಾಗಿ ಹಿರಿಯ, ಕಿರಿಯ ಸ್ನೇಹಿತರಿದ್ದಾರೆ. ಪವಿತ್ರ ಸ್ನೇಹವನ್ನು ನಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿಲ್ಲ. ಆದರೆ, ಸಿದ್ದರಾಮಯ್ಯರವರಿಗೆ ಇದೊಂದು ಅಂಟುಜಾಡ್ಯ ಎಂಬುದನ್ನು ಸಾಬೀತು ಪಡಿಸುತ್ತಲೆ ಬಂದಿದ್ದಾರೆ. ಉಪಚುನಾವಣೆ ಘೋಷಣೆಯಾದ ನಂತರ ಪುತ್ರನ ಗೆಳೆಯನನ್ನು ಬಿಜೆಪಿಗೆ ಕಳುಹಿಸಿರುವ ಮರ್ಮವನ್ನು ಕಾಂಗ್ರೆಸ್ಸಿಗರೂ ಬಲ್ಲರು! ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುಟುಕಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಉಪ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಮತ್ತು ಜೆಡಿ(ಎಸ್) ಒಳಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸುವ ಸಿದ್ದರಾಮಯ್ಯ ಅವರ ಬಳಿ ಇದಕ್ಕೆ ಯಾವ ಸಾಕ್ಷಿ ಇದೆ ? “ದೋಸ್ತಿ ದಾಳ” ವನ್ನು ರಾಜಕೀಯವಾಗಿ ಬಳಸಿಕೊಂಡು ತಾವು ಬೆಳೆದ ಪಕ್ಷಗಳಿಗೆ ಕುತ್ತು ತರುವ ಚಾಳಿ ಅವರಿಗೆ ಹೊಸತೇನಲ್ಲ ಎಂದು ಆರೋಪಿಸಿದ್ದಾರೆ.

ವೈಯಕ್ತಿಕ ನೆಲೆಯಲ್ಲಿ ಸ್ನೇಹ ವಿಶ್ವಾಸವೇ ಬೇರೆ, ಆದರೆ, ಉಪ ಚುನಾವಣೆ ಘೋಷಣೆಯಾದ ನಂತರ ಪುತ್ರನ ಸ್ನೇಹಿತನನ್ನು ದಾಳವಾಗಿ ಬಳಸಿಕೊಂಡು ಮತ್ತೊಂದು ಪಕ್ಷಕ್ಕೆ ಕಳುಹಿಸುವ ಜಾಯಮಾನ ನನ್ನದಲ್ಲ ಎಂದು ತಿರುಗೇಟು ನೀಡಿದ್ದಾರೆ.

SCROLL FOR NEXT