ಸಂಗ್ರಹ ಚಿತ್ರ 
ರಾಜಕೀಯ

ರಂಗೇರುತ್ತಿದೆ ಉಪಚುನಾವಣೆ ಸಮರ: ಜೆಡಿಎಸ್-ಕಾಂಗ್ರೆಸ್ ನಾಯಕರ ನಡುವೆ ವೈಯಕ್ತಿಕ ವಾಗ್ದಾಳಿ 

ಉಪಚುನಾವಣೆ ಕಣ ರಂಗೇರುತ್ತಿದ್ದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಮಾತಿನ ಸಮರ ಕೂಡ ಜೋರಾಗುತ್ತಿದೆ. ಹಳೇ ದೋಸ್ತಿಗಳಾದ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ನಡುವೆ ಗುದ್ದಾಟ ಮತ್ತೆ ಮುನ್ನೆಲೆಗೆ ಬಂದಿದೆ. 

ಬೆಂಗಳೂರು: ಉಪಚುನಾವಣೆ ಕಣ ರಂಗೇರುತ್ತಿದ್ದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಮಾತಿನ ಸಮರ ಕೂಡ ಜೋರಾಗುತ್ತಿದೆ. ಹಳೇ ದೋಸ್ತಿಗಳಾದ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ನಡುವೆ ಗುದ್ದಾಟ ಮತ್ತೆ ಮುನ್ನೆಲೆಗೆ ಬಂದಿದೆ. 

ಜೆಡಿಎಸ್ ಹಾಗೂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮದೇ ಧಾಟಿಯಲ್ಲಿ ಮಾತಿನ ಬಾಣಗಳನ್ನು ಪ್ರಯೋಗಿಸಿದ್ದಾರೆ. 

ಜೆಡಿಎಸ್ ಒಂದು ರಾಜಕೀಯ ಪಕ್ಷವೇ ಅಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರು ಹೆಚ್.ಡಿ.ಕುಮಾರಸ್ವಾಮಿ ಮತ್ತು ದೇವೇಗೌಡ ಅವರ ಕಣ್ಣೀರಿನ ಬಗ್ಗೆ ಲೇವಡಿ ಮಾಡಿದ್ದಾರೆ.

ಇದಕ್ಕೆ ತೀವ್ರವಾಗಿ ಕಿಡಿಕಾರಿರುವ ಕುಮಾರಸ್ವಾಮಿಯವರು, ಜೆಡಿಎಸ್'ನಿಂದ ಪ್ರವರ್ದನಮಾನಕ್ಕೆ ಬಂದಿದ್ದ, ಜೆಡಿಎಸ್ ನಿಂದಲೇ ಉಪಮುಖ್ಯಮಂತ್ರಿಯಾಗಿದ್ದ ನಾಯಕರೊಬ್ಬರು ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿದ್ದು, ಜೆಡಿಎಸ್ ರಾಜಕೀಯ ಪಕ್ಷವಲ್ಲ ಎಂದಿದ್ದಾರೆಂದು ಸಿದ್ದರಾಮಯ್ಯ ಅವರ ಹೆಸರನ್ನು ಹೇಳದೆಯೇ ಟೀಕಾ ಪ್ರಹಾರ ನಡೆಸಿದ್ದಾರೆ. 

ಸಭೆಯೊಂದರಲ್ಲಿ ಜೆಡಿಎಸ್ ಮುಖಂಡರನ್ನು ತಮ್ಮ ಈಗಿನ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾ ಅದೇ ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಜೆಡಿಎಸ್ ರಾಜಕೀಯ ಪಕ್ಷವಲ್ಲ ಎಂದು ಹೇಳಿದ್ದಾರೆ. ಉಪಚುನಾವಣೆಗೆ ಅಭ್ಯರ್ಥಿಯ ಗತಿ ಇಲ್ಲದೆ ಜೆಡಿಎಸ್ ಅವರನ್ನು ಸೆಳೆದ ನಿಮ್ಮದು ರಾಜಕೀಯ ಪಕ್ಷವೇ ಎಂದು ಹರಿಹಾಯ್ದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT