ಕುಸುಮಾ 
ರಾಜಕೀಯ

ಜ್ಯೋತಿಷಿ- ವಾಸ್ತು ಶಾಸ್ತ್ರಜ್ಞರ ಸಲಹೆಯಂತೆ ಚುನಾವಣೆಯಲ್ಲಿ ಮಹಿಳೆ ಕಣಕ್ಕೆ: ಟ್ರಬಲ್ ಶೂಟರ್ ಗೇಮ್ ಪ್ಲಾನ್!

ಕಾಂಗ್ರೆಸ್ ಟ್ರಬಲ್ ಶೂಟರ್ ಎಂದೇ ಖ್ಯಾತಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಉಪ ಚುನಾವಣೆಯಲ್ಲಿ ಗೆಲ್ಲಲೇಬೇಕೆಂಬ ಹಠದಿಂದ ತಂತ್ರ ರೂಪಿಸುತ್ತಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಟ್ರಬಲ್ ಶೂಟರ್ ಎಂದೇ ಖ್ಯಾತಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಉಪ ಚುನಾವಣೆಯಲ್ಲಿ ಗೆಲ್ಲಲೇಬೇಕೆಂಬ ಹಠದಿಂದ ತಂತ್ರ ರೂಪಿಸುತ್ತಿದ್ದಾರೆ.

ಜ್ಯೋತಿಷಿಗಳ ಸಲಹೆ ಮೇರೆಗೆ ಆರ್ ಆರ್ ನಗರ ಚುನಾವಣೆಗೆ ದಿವಂಗತ ಐಎಎಸ್ ಅಧಿಕಾರಿ ಡಿಕೆ ರವಿ ಪತ್ನಿ ಕುಸುಮಾ ಅವರನ್ನು ಕಣಕ್ಕಿಳಿಸಿದ್ದಾರೆ. 

ನಕ್ಷತ್ರಗಳು ಮತ್ತು ವಾಸ್ತು ಮೇಲೆ ಅಪಾರ ನಂಬಿಕೆ ಇಟ್ಟಿರುವ ಡಿಕೆ ಶಿವಕುಮಾರ್ ಉಪ ಚುನಾವಣೆಯಲ್ಲಿ ಅದನ್ನು ಪ್ರಯೋಗ ಮಾಡಲು ಮುಂದಾಗಿದ್ದಾರೆ. 

2004 ರಲ್ಲಿ ಇದೇ ರೀತಿಯ ಸಲಹೆ ಪಡೆದು ಕನಕಪುರ ಲೋಕಸಭಾ ಕ್ಷೇತ್ರದಲ್ಲಿ  ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ವಿರುದ್ಧ ತೇಜಸ್ವಿನಿ ರಮೇಶ್ ಅವರನ್ನು ಕಣಕ್ಕಿಳಿಸಿದ್ದರು. 

ಕಳೆದ ವಾರ ಕುಸುಮಾ ಅವರು ಅದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದ ಫೋಟೋ ವೈರಲ್ ಆಗಿತ್ತು, ಅದಾದ ನಂತರ ಕುಸುಮಾ ಅಭ್ಯರ್ಥಿಯಾಗಿ ಆಯ್ಕೆಯಾಗುವುದು ಖಚಿತವಾಯಿತು.

ಇನ್ನು ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯನ್ನು ಕೂಡ ವಾಸ್ತು ಪ್ರಕಾರವೇ ನಿರ್ಮಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. 

ಅಂತೆಯೇ, ಮುಂಭಾಗವು ಭವ್ಯವಾದ ಗ್ರೀಕೋ-ರೋಮನ್ ಲುಕ್ ಪಡೆದುಕೊಂಡಿದೆ. ಆರು ಜೋಡಿ ಕೊರಿಂಥಿಯನ್ ಕಂಬಗಳೊಂದಿಗೆ ಕೆಪಿಸಿಸಿ ಭವನ ನಿರ್ಮಾಣವಾಗುತ್ತಿದೆ, ಇದು ಶಿವಕುಮಾರ್ ಅವರ ಗ್ಲೋಬಲ್ ಅಕಾಡೆಮಿ ಕಟ್ಟಡವನ್ನೇ ಹೋಲುವಂತಿದೆ, ಬಾಗಿಲು ಮತ್ತು ಕಿಟಕಿ ಫ್ರೇಮ್ ಗಳನ್ನು ಬದಲಾಯಿಸಲಾಗಿದೆ, ಜೊತೆಗೆ ಅವರ ಕೊಠಡಿಯಲ್ಲಿ
ಕುಳಿತುಕೊಳ್ಳುವ ಸ್ಥಿತಿ ಕೂಡ ಬದಲಾಗಿದೆ.

ಈ ವರ್ಷದ ಆರಂಭದಲ್ಲಿ ಶಿವಕುಮಾರ್ ಮಧ್ಯಪ್ರದೇಶದ ಡಾಟಿಯಾದ ಬಗಲಮುಖಿ ದೇವಾಲಯದ ಶ್ರೀ ಪೀತಾಂಬರಿ ಪೀಠದಲ್ಲಿ ಯಜ್ಞ ಮತ್ತು ಹೋಮ ಹವನ ನಡೆಸಿದ್ದರು. ಕಳೆದ ವರ್ಷ ಜೈಲಿನಿಂದ ಬಿಡುಗಡೆಯಾದ ನಂತರ ಕಲಬುರಗಿ ಮತ್ತು ಮೈಸೂರಿನಲ್ಲಿ ವಿಶೇಷ ಪೂಜೆ ನೆರವೇರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT