ಜಿ.ಟಿ ದೇವೇಗೌಡ ಶಿವಕುಮಾರ್ ಭೇಟಿ 
ರಾಜಕೀಯ

ಮಗನ ರಾಜಕೀಯ ಭವಿಷ್ಯಕ್ಕಾಗಿ ಡಿಕೆ ಶಿವಕುಮಾರ್ ಭೇಟಿ: 'ಕೈ' ಹಿಡಿಯಲಿದ್ದಾರಾ ಜಿ.ಟಿ. ದೇವೇಗೌಡ?

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಜಿ.ಟಿ ದೇವೇಗೌಡ ಅವರು ಬುಧವಾರ ಬೆಳಗ್ಗೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಹಲವು ಊಹಾ ಪೋಹಗಳಿಗೆ ಎಡೆ ಮಾಡಿಕೊಟ್ಟಿದೆ.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಜಿ.ಟಿ ದೇವೇಗೌಡ ಅವರು ಬುಧವಾರ ಬೆಳಗ್ಗೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಹಲವು ಊಹಾ ಪೋಹಗಳಿಗೆ ಎಡೆ ಮಾಡಿಕೊಟ್ಟಿದೆ.

ಕೊರೋನಾದಿಂದ ಗುಣಮುಖರಾದ ನಂತರ ಮತ್ತು ಸಿಬಿಐ ದಾಳಿ ನಂತರ ಶಿವಕುಮಾರ್ ಅವರನ್ನು ಭೇಟಿಯಾಗಿರಲಿಲ್ಲ, ಇದೊಂದು ಸೌಜನ್ಯದ ಭೇಟಿ ಎಂದು ಹೇಳಿದ್ದಾರೆ.

ಪುತ್ರ ಹರೀಶ್ ಗೌಡ ಅವರ ರಾಜಕೀಯ ಭವಿಷ್ಯವನ್ನು ಗಮನದಲ್ಲಿಸಿರಿಸಿಕೊಂಡು ಜಿ.ಟಿ ದೇವೇಗೌಡ  ಪದೇ ಪದೇ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪುತ್ರನಿಗೆ ಟಿಕೆಟ್ ಕೊಡಿಸಲು ಈಗಿನಿಂದಲೇ ತಯಾರಿ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

2019ರ ಹುಣಸೂರು ವಿಧಾನಸಭೆ ಉಪ ಚುನಾವಣೆಯಲ್ಲಿ ಜಿಟಿಡಿ ಪುತ್ರ ಹರೀಶ್ ಗೌಡ ಬಿಜೆಪಿ ಅಭ್ಯರ್ಥಿ ಎಚ್. ವಿಶ್ವನಾಥ್ ಅವರಿಗೆ ಬೆಂಬಲ ನೀಡಿದ್ದರು.

ಆದರೆ ಹುಣಸೂರು ವಿಧಾನಸಭೆ ಉಪಚುನಾವಣೆ ಯಲ್ಲಿ ಫಲಿತಾಂಶ ನೋಡಿದ ನಂತರ ಮೈಸೂರು ಭಾಗದಲ್ಲಿ ಮುಂದಿನ ನಾಯಕನನ್ನಾಗಿ ಬೆಳೆಸಲು ಶಿವಕುಮಾರ್ ಅವರ ಸಹಾಯಕ್ಕಾಗಿ ಜಿಟಿ ದೇವೇಗೌಡ ಬಯಸುತ್ತಿದ್ದಾರೆ.

ಇದರ ಜೊತೆಗೆ ಜಿಟಿ ದೇವೇಗೌಡ ಕೂಡ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ, ಆದರೆ ಈ ಹೇಳಿಕೆಯನ್ನು ಜಿಟಿಡಿ ನಿರಾಕರಿಸಿದ್ದಾರೆ, ಈ ಮೊದಲು ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಲಾಗುತ್ತಿತ್ತು, ನನ್ನ ಮನಸ್ಸಿನಲ್ಲಿ ಇದ್ಯಾವುದಕ್ಕೂ ಅವಕಾಶವಿಲ್ಲ,. ನಾನು ಹಲವು ಜೆಡಿಎಸ್ ನಾಯಕರ ಜೊತೆ ಕೆಲಸ ಮಾಡಿದ್ದೇನೆ, ಕುಮಾರ ಸ್ವಾಮಿ ಅವರನ್ನು ಸಿಎಂ ಮಾಡಲು ನಾನು ಕಷ್ಟ ಪಟ್ಟಿದ್ದೇನೆ, ಹೀಗಿರುವಾಗ ಸರ್ಕಾರ ಕೆಡವಿದ ಬಿಜೆಪಿಗೆ ನಾನು ಹೇಗೆ ಸೇರಲಿ ಎಂದು ಪ್ರಶ್ನಿಸಿದ್ದಾರೆ.

ಡಿಕೆ ಶಿವಕುಮಾರ್ ಮನೆಗೆ ಬಂದಿದ್ದ ಸೌಜನ್ಯದ ಭೇಟಿಯಾಗಿತ್ತು, 2019 ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಸರ್ಕಾರ ಬೀಳಿಸಲು ಮುಂಬೈ ಹೋಟೆಲ್ ನಲ್ಲಿ ವಾಸ್ತವ್ಯಹೂಡಿದ್ದಾಗ ರೆಬೆಲ್ ಶಾಸಕರ ಮನವೊಲಿಸಲು ಡಿಕೆ ಶಿವಕುಮಾರ್ ಜೊತೆ ಜಿಟಿ ದೇವೇಗೌಡ ಕೂಡ ಮುಂಬಯಿಗೆ ತೆರಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT