ರಣದೀಪ್ ಸಿಂಗ್ ಸುರ್ಜೇವಾ 
ರಾಜಕೀಯ

ಕಾಯ್ದೆ ದುರ್ಬಲಗೊಳಿಸಿ ರೈತರಿಗೆ ಮರಣಶಾಸನ ಬರೆಯಲು ಹೊರಟ ಕೇಂದ್ರ ಸರ್ಕಾರ: ಸುರ್ಜೇವಾಲ ಟೀಕಾಪ್ರಹಾರ

ಕೇಂದ್ರದ ಬಿಜೆಪಿ ನೇತೃತ್ವದ ಪ್ರಧಾನಿ ನರೇಂದ್ರಮೋದಿ ಸರ್ಕಾರ ಕೃಷಿ ಸಂಬಂಧಿತ ಕಾಯ್ದೆಗಳ ಮೂಲ ಸ್ವರೂಪವನ್ನೇ ತಿದ್ದುಪಡಿ ಮಾಡುವ ಮೂಲಕ ಅಂಬಾನಿ-ಅದಾನಿಗಳಿಗೆ ಅನುಕೂಲ ಮಾಡಿ ರೈತರಿಗೆ ಮರಣ ಶಾಸನ ಬರೆಯಲು ಮುಂದಾಗಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ.

ಮಂಡ್ಯ:  ಕೇಂದ್ರದ ಬಿಜೆಪಿ ನೇತೃತ್ವದ ಪ್ರಧಾನಿ ನರೇಂದ್ರಮೋದಿ ಸರ್ಕಾರ ಕೃಷಿ ಸಂಬಂಧಿತ ಕಾಯ್ದೆಗಳ ಮೂಲ ಸ್ವರೂಪವನ್ನೇ ತಿದ್ದುಪಡಿ ಮಾಡುವ ಮೂಲಕ ಅಂಬಾನಿ-ಅದಾನಿಗಳಿಗೆ ಅನುಕೂಲ ಮಾಡಿ ರೈತರಿಗೆ ಮರಣ ಶಾಸನ ಬರೆಯಲು ಮುಂದಾಗಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ.

ಮಂಡ್ಯದ ಅಂಬೇಡ್ಕರ್ ಭವನದಲ್ಲಿ ನಡೆದ ರೈತ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 2014ರಲ್ಲಿ ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ರೈತರ ಭೂಸ್ವಾಧೀನ ಕಾಯ್ದೆ ರೈತರಿಗೆ ಭದ್ರತೆ ಒದಗಿಸಿತ್ತು. ಆದರೆ ನಂತರ ಬಂದ ಮೋದಿ ಸರ್ಕಾರ ರೈತರ ಈ ಹಕ್ಕುಗಳನ್ನು ಮೊಟಕುಗೊಳಿಸಿ ಅವರನ್ನು ದುರ್ಬಲ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.

ಕನಿಷ್ಠ ಬೆಂಬಲ ಬೆಲೆ ಕೂಡ ರದ್ದು ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಆ ಮೂಲಕ ಕೈಗಾರೀಕರಣ ಮತ್ತು ಖಾಸಗೀಕರಣಕ್ಕೆ ಕೆಂಪು ಹಾಸು ಹಾಸಿದೆ. ಇದನ್ನು ಪ್ರತಿಯೊಬ್ಬರೂ ವಿರೋಧಿಸಬೇಕಿದೆ ಎಂದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT