ಶರತ್ ಬಚ್ಚೇಗೌಡ 
ರಾಜಕೀಯ

ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಗೆ ಮೂಹೂರ್ತ ಫಿಕ್ಸ್

ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಪಕ್ಷ ಸೇರಲು ಮುಹೂರ್ತ ಫಿಕ್ಸ್ ಆಗಿದೆ. ಈಗಾಗಲೇ ಅಂತಿಮ ಹಂತದ ಮಾತುಕತೆಯೂ ಮುಗಿದಿದ್ದು ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸರಳವಾಗಿ ಪಕ್ಷ ಸೇರಲು ತಯಾರಿ ನಡೆದಿದೆ ಎನ್ನಲಾಗಿದೆ.

ಬೆಂಗಳೂರು: ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಪಕ್ಷ ಸೇರಲು ಮುಹೂರ್ತ ಫಿಕ್ಸ್ ಆಗಿದೆ. ಈಗಾಗಲೇ ಅಂತಿಮ ಹಂತದ ಮಾತುಕತೆಯೂ ಮುಗಿದಿದ್ದು ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸರಳವಾಗಿ ಪಕ್ಷ ಸೇರಲು ತಯಾರಿ ನಡೆದಿದೆ ಎನ್ನಲಾಗಿದೆ.

ಹೊಸಕೋಟೆ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಬಳಿಕ ಶರತ್ ಬಚ್ಚೇಗೌಡ ಅವರು ಮೂರು ಪಕ್ಷಗಳ ಬಾಗಿಲು ಬಡಿದಿದ್ದರು. ಆದರೆ ಅಂತಿಮವಾಗಿ ಇದೀಗ ಕಾಂಗ್ರೆಸ್ ಪಕ್ಷ ಸೇರಲು ವೇದಿಕೆ ರೆಡಿಯಾಗಿದೆ. 

ಶರತ್ ಅವರು ಇದೇ ಅಕ್ಟೋಬರ್ 25 ರಂದು ಭಾನುವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ. ವಿಜಯದಶಮಿಯ ಶುಭ ಮುಹೂರ್ತದಲ್ಲಿ ಪಕ್ಷೇತರ ಶಾಸಕ 'ಕೈ' ಹಿಡಿಯಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ಮಾಜಿ ಸಚಿವ ಕೃಷ್ಣ ಭೈರೇಗೌಡ ಅವರು ಶರತ್ ಬಚ್ಚೇಗೌಡ ಅವರೊಂದಿಗೆ ಮಾತುಕತೆ ನಡೆಸಿದ್ದರು. ಇದೀಗ ಕಾಂಗ್ರೆಸ್ ಸೇರಲು ಶರತ್ ಒಪ್ಪಿದ್ದಾರೆ ಎಂದು ಮಾಜಿ ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟಪಡಿಸಿದ್ದಾರೆ. 

ಬಿಜೆಪಿ ಸೇರುವ ಪ್ರಯತ್ನ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಉಪ ಚುನಾವಣೆಯಲ್ಲಿ ಗೆದ್ದ ಬಳಿಕ ಮಾತೃ ಪಕ್ಷ ಸೇರಲು ಶರತ್ ಇನ್ನಿಲ್ಲದ ಕಸರತ್ತು ನಡೆಸಿದ್ದರು. ಆದರೆ ಎಂಬಿಟಿ ನಾಗರಾಜ್ ಅವರ ವಿರೋಧದಿಂದಾಗಿ ಬಿಜೆಪಿ ಸೇರುವ ಅವರ ಪ್ರಯತ್ನ ಕೈಗೂಡಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT