ಶರತ್ ಬಚ್ಚೇಗೌಡ 
ರಾಜಕೀಯ

ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಗೆ ಮೂಹೂರ್ತ ಫಿಕ್ಸ್

ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಪಕ್ಷ ಸೇರಲು ಮುಹೂರ್ತ ಫಿಕ್ಸ್ ಆಗಿದೆ. ಈಗಾಗಲೇ ಅಂತಿಮ ಹಂತದ ಮಾತುಕತೆಯೂ ಮುಗಿದಿದ್ದು ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸರಳವಾಗಿ ಪಕ್ಷ ಸೇರಲು ತಯಾರಿ ನಡೆದಿದೆ ಎನ್ನಲಾಗಿದೆ.

ಬೆಂಗಳೂರು: ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಪಕ್ಷ ಸೇರಲು ಮುಹೂರ್ತ ಫಿಕ್ಸ್ ಆಗಿದೆ. ಈಗಾಗಲೇ ಅಂತಿಮ ಹಂತದ ಮಾತುಕತೆಯೂ ಮುಗಿದಿದ್ದು ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸರಳವಾಗಿ ಪಕ್ಷ ಸೇರಲು ತಯಾರಿ ನಡೆದಿದೆ ಎನ್ನಲಾಗಿದೆ.

ಹೊಸಕೋಟೆ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಬಳಿಕ ಶರತ್ ಬಚ್ಚೇಗೌಡ ಅವರು ಮೂರು ಪಕ್ಷಗಳ ಬಾಗಿಲು ಬಡಿದಿದ್ದರು. ಆದರೆ ಅಂತಿಮವಾಗಿ ಇದೀಗ ಕಾಂಗ್ರೆಸ್ ಪಕ್ಷ ಸೇರಲು ವೇದಿಕೆ ರೆಡಿಯಾಗಿದೆ. 

ಶರತ್ ಅವರು ಇದೇ ಅಕ್ಟೋಬರ್ 25 ರಂದು ಭಾನುವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ. ವಿಜಯದಶಮಿಯ ಶುಭ ಮುಹೂರ್ತದಲ್ಲಿ ಪಕ್ಷೇತರ ಶಾಸಕ 'ಕೈ' ಹಿಡಿಯಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ಮಾಜಿ ಸಚಿವ ಕೃಷ್ಣ ಭೈರೇಗೌಡ ಅವರು ಶರತ್ ಬಚ್ಚೇಗೌಡ ಅವರೊಂದಿಗೆ ಮಾತುಕತೆ ನಡೆಸಿದ್ದರು. ಇದೀಗ ಕಾಂಗ್ರೆಸ್ ಸೇರಲು ಶರತ್ ಒಪ್ಪಿದ್ದಾರೆ ಎಂದು ಮಾಜಿ ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟಪಡಿಸಿದ್ದಾರೆ. 

ಬಿಜೆಪಿ ಸೇರುವ ಪ್ರಯತ್ನ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಉಪ ಚುನಾವಣೆಯಲ್ಲಿ ಗೆದ್ದ ಬಳಿಕ ಮಾತೃ ಪಕ್ಷ ಸೇರಲು ಶರತ್ ಇನ್ನಿಲ್ಲದ ಕಸರತ್ತು ನಡೆಸಿದ್ದರು. ಆದರೆ ಎಂಬಿಟಿ ನಾಗರಾಜ್ ಅವರ ವಿರೋಧದಿಂದಾಗಿ ಬಿಜೆಪಿ ಸೇರುವ ಅವರ ಪ್ರಯತ್ನ ಕೈಗೂಡಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT