ಬಿ ಶ್ರೀರಾಮುಲು, ಡಾ ಕೆ ಸುಧಾಕರ್ 
ರಾಜಕೀಯ

ಡಾ.ಸುಧಾಕರ್ ಗೆ ವೈದ್ಯಕೀಯ ಶಿಕ್ಷಣ ಜೊತೆಗೆ ಆರೋಗ್ಯ, ಶ್ರೀರಾಮುಲುಗೆ ಸಮಾಜ ಕಲ್ಯಾಣ ಇಲಾಖೆ ಉಸ್ತುವಾರಿ

ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ, ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಾಚನೆ ಸುದ್ದಿಗಳ ಮಧ್ಯೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಕೆಲವು ಸಚಿವರುಗಳ ಖಾತೆಗಳನ್ನು ಬದಲಾವಣೆ ಮಾಡಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಸರ್ಕಾರದ ಆದೇಶಕ್ಕೆ ಸಹಿ ಹಾಕಿದ್ದಾರೆ.

ಬೆಂಗಳೂರು: ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ, ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಾಚನೆ ಸುದ್ದಿಗಳ ಮಧ್ಯೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಪ್ರಮುಖ ಇಬ್ಬರು ಸಚಿವರುಗಳ ಖಾತೆಗಳನ್ನು ಬದಲಾವಣೆ ಮಾಡಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಸರ್ಕಾರದ ಆದೇಶಕ್ಕೆ ಸಹಿ ಹಾಕಿದ್ದಾರೆ.

ಕೋವಿಡ್-19 ಪ್ರಕರಣಗಳು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವುದರ ಮಧ್ಯೆ ಆರೋಗ್ಯ ಖಾತೆಯ ಹೆಚ್ಚುವರಿ ಉಸ್ತುವಾರಿಯನ್ನು ಕೂಡ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಹೆಗಲಿಗೆ ಸಿಎಂ ಹಾಕಿದ್ದಾರೆ. ಆರೋಗ್ಯ ಸಚಿವರಾಗಿದ್ದ ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಇಲಾಖೆ ಖಾತೆ ನೀಡಲಾಗಿದೆ. ಅವರ ಬಳಿಯಿದ್ದ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯನ್ನು ಸಿಎಂ ವಾಪಸ್ ಪಡೆದುಕೊಂಡಿದ್ದಾರೆ.

ಇನ್ನು ಉಪ ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಖಾತೆ ಹೊತ್ತಿದ್ದ ಗೋವಿಂದ ಎಂ ಕಾರಜೋಳ ಅವರಿಗೆ ಲೋಕೋಪಯೋಗಿ ಖಾತೆಯನ್ನು ಉಳಿಸಲಾಗಿದೆ.

ಇದೀಗ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಬಳಿ ಡಿಪಿಎಆರ್, ಹಣಕಾಸು, ಬೆಂಗಳೂರು ಅಭಿವೃದ್ಧಿ, ಇಂಧನ, ಗೃಹ ಇಲಾಖೆಯ ಗುಪ್ತಚರ ವಿಭಾಗ, ಯೋಜನೆ, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ, ಸಣ್ಣ ಪ್ರಮಾಣ ಕೈಗಾರಿಕೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಮತ್ತು ಇತರ ಎಲ್ಲಾ ಹಂಚಿಕೆ ಮಾಡದಿರುವ ಖಾತೆಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

B-52 Bomber Bursts: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಭೀಕರ ವಿಮಾನ ಅಪಘಾತ, ಬಿ-52 ಬಾಂಬರ್ ಪತನ, 8 ಮಂದಿ ಸಾವು! Video

'ಆಸ್ತಿ ಘೋಷಿಸಲು ಕುಮಾರಸ್ವಾಮಿ ಸಿದ್ಧವೇ?: ಡಿಕೆ ಶಿವಕುಮಾರ್ ನಿಮ್ಮ ಇಡೀ ಕುಟುಂಬದ ಜಾತಕ ಬಿಚ್ಚಿಡಲಿದ್ದಾರೆ'

15 ಕೋಟಿ ರೂ. ಕೊಟ್ರೆ ದುಬೈ ಶೇಖ್ ಜೊತೆ ಮಲಗಬಹುದು! Influencer ಅಪೂರ್ವ ಮುಖಿಜಾ Video ಮತ್ತೆ ವೈರಲ್! ಏನಿದು ಹೊಸ ವಿವಾದ?

ಶಕ್ತಿ ಯೋಜನೆಯಡಿ 'ಸ್ಮಾರ್ಟ್ ಕಾರ್ಡ್' ವಿತರಣೆಗೆ ಅಂತಿಮ ಸಿದ್ಧತೆ- ಸಚಿವ ಬೈರತಿ ಸುರೇಶ್

ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆ ಖಾತರಿಗೆ ಡಿ ಕೆ ಶಿವಕುಮಾರ್ ಸೂಚನೆ

SCROLL FOR NEXT