ಸುರೇಶ್ ಅಂಗಡಿ ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ(ಸಂಗ್ರಹ ಚಿತ್ರ) 
ರಾಜಕೀಯ

ಸುರೇಶ್ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರ: ಕುಟುಂಬಸ್ಥರಿಗೆ ಟಿಕೆಟ್ ನೀಡಲು ಹೆಚ್ಚಿದ ಒತ್ತಡ

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯವರ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರ ಸ್ಥಾನ ತೆರವಾಗಿದೆ. ಈ ನಿಟ್ಟಿನಲ್ಲಿ ಉಪ ಚುನಾವಣೆ ನಡೆಯಲಿದ್ದು ಕೆಲವು ಬಿಜೆಪಿ ನಾಯಕರು ಶತಾಯಗತಾಯ ತಮಗೆ ಟಿಕೆಟ್ ಸಿಗಬೇಕೆಂದು ಪ್ರಯತ್ನಿಸುತ್ತಿದ್ದಾರೆ.

ಬೆಳಗಾವಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯವರ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರ ಸ್ಥಾನ ತೆರವಾಗಿದೆ. ಈ ನಿಟ್ಟಿನಲ್ಲಿ ಉಪ ಚುನಾವಣೆ ನಡೆಯಲಿದ್ದು ಕೆಲವು ಬಿಜೆಪಿ ನಾಯಕರು ಶತಾಯಗತಾಯ ತಮಗೆ ಟಿಕೆಟ್ ಸಿಗಬೇಕೆಂದು ಪ್ರಯತ್ನಿಸುತ್ತಿದ್ದಾರೆ.

ಆದರೆ ಬಿಜೆಪಿಯ ಹಲವು ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್, ರಮೇಶ್ ಜಾರಕಿಹೊಳಿ ಮೊದಲಾದವರು ಸುರೇಶ್ ಅಂಗಡಿಯವರ ಪತ್ನಿ ಅಥವಾ ಮಗಳು ಶ್ರದ್ಧಾಗೆ ಟಿಕೆಟ್ ನೀಡಬೇಕೆಂದು ಬಹಿರಂಗವಾಗಿಯೇ ಬೆಂಬಲ ವ್ಯಕ್ತಪಡಿಸಿದ್ದಾರೆ.

ಜಗದೀಶ್ ಶೆಟ್ಟರ್ ಅವರು ತಮ್ಮ ಸೊಸೆ ಶ್ರದ್ಧಾಗೆ ಟಿಕೆಟ್ ಸಿಗಬೇಕೆಂದು ಬಯಸಿದರೆ ಇನ್ನು ಹಲವರು ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಅವರಿಗೆ ನೀಡಬೇಕೆಂದು ಕೇಳುತ್ತಿದ್ದಾರೆ. ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದ್ದು, ರಮೇಶ್ ಜಾರಕಿಹೊಳಿಯವರ ಪುತ್ರ ಅಮರನಾಥ ಅವರಿಗೆ ಸಹ ಹಲವರಿಂದ ಬೆಂಬಲ ಸಿಗುತ್ತಿದೆ. ಆದರೆ ತಮ್ಮ ಪುತ್ರ ಟಿಕೆಟ್ ಆಕಾಂಕ್ಷಿಯಲ್ಲ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ನನ್ನ ಸೋದರಿ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಅವರಿಗೆ ಸಿಗಬೇಕೆಂದು ನನ್ನ ಬಯಕೆ ಎನ್ನುತ್ತಾರೆ.

ಸುರೇಶ್ ಅಂಗಡಿಯವರ ಸಂಬಂಧಿಕರು, ಬೆಂಬಲಿಗರು ಮತ್ತು ಸ್ನೇಹಿತರು ಅಂಗಡಿಯವರ ಪತ್ನಿ ಮಂಗಳಾಗೆ ಟಿಕೆಟ್ ಸಿಗಬೇಕೆಂದು ಬಯಸುತ್ತಿದ್ದಾರೆ. ಅಂಗಡಿಯವರ ಹತ್ತಿರದ ಬಂಧು ಲಿಂಗರಾಜ್ ಪಾಟೀಲ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಅವರ ಕುಟುಂಬದವರಿಗೇ ನೀಡಬೇಕೆಂದು ಕೇಳುತ್ತಿದ್ದಾರೆ.

ಸುರೇಶ್ ಅಂಗಡಿಯವರ ಕುಟುಂಬಸ್ಥರು ರಾಜಕೀಯದಲ್ಲಿ ಯಾರೂ ಸಕ್ರಿಯವಾಗಿಲ್ಲ. ಹೀಗಿರುವಾಗ ಬಿಜೆಪಿ ಉನ್ನತ ಮಟ್ಟದ ನಾಯಕರು ಅದಕ್ಕೆ ಮಣೆ ಹಾಕುತ್ತಾರಾ ಎಂಬುದು ಇಲ್ಲಿರುವ ಕುತೂಹಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT