ರಾಜಕೀಯ

ಆರ್ ಆರ್ ನಗರ ಉಪಚುನಾವಣೆ: ಮೂರು ಪಕ್ಷಗಳ ಘಟಾನುಘಟಿಗಳಿಂದ ಇಂದು ನಾಮಪತ್ರ ಸಲ್ಲಿಕೆ

Shilpa D

ಬೆಂಗಳೂರು: ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಶುಕ್ರವಾರ ಕೊನೆಯ ದಿನವಾದ ಹಿನ್ನೆಲೆಯಲ್ಲಿ ರಾಜ ರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಗಾಗಿ ಇಂದು ಮೂರು ಪಕ್ಷಗಳ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಆರ್ ಆರ್ ನಗರದ ಬಿಬಿಎಂಪಿ ಕಚೇರಿಯಲ್ಲಿ ಬೆಳಗ್ಗೆ 10.30ಕ್ಕೆ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ  ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಎಚ್.ಕುಸುಮಾ ಬೆಳಗ್ಗೆ 11.45ಕ್ಕೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಆರ್ ಆರ್ ನಗರ ಉಪ ಚುನಾವಣೆ ಕಾಂಗ್ರೆಸ್ ಉಸ್ತುವಾರಿ ರಾಮಲಿಂಗಾ ರೆಡ್ಡಿ ಮತ್ತು ಮಾಜಿ ಸಚಿವ ಕೃಷ್ಣ ಭೈರೇಗೌಡ ಈ ವೇಳೆ ಹಾಜರಾಗಲಿದ್ದಾರೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಬೆಳಗ್ಗೆ 9.30 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.

SCROLL FOR NEXT