ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ 
ರಾಜಕೀಯ

ಕುಸುಮಾ ವಿರುದ್ಧ ಎಫ್ ಐಆರ್ ಹೇಡಿತನ, ನೀಚತನದ ರಾಜಕಾರಣ: ಡಿಕೆಶಿ ಕೆಂಡಾಮಂಡಲ

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬೆಂಗಾವಲು ಪಡೆಯ ಸಿಬ್ಬಂದಿ ವಿರುದ್ಧ ಪೊಲೀಸ್ ಅಧಿಕಾರಿಗಳು ಎಫ್‌ಐಆರ್‌ ದಾಖಲಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬೆಂಗಾವಲು ಪಡೆಯ ಸಿಬ್ಬಂದಿ ವಿರುದ್ಧ ಪೊಲೀಸ್ ಅಧಿಕಾರಿಗಳು ಎಫ್‌ಐಆರ್‌ ದಾಖಲಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದಾಶಿವ ನಗರದ ನಿವಾಸದಲ್ಲಿ ಇಂದು ತುರ್ತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರ್‌ಆರ್‌ ನಗರದ ನಮ್ಮ ಪಕ್ಷದ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದು ಹೇಡಿತನ, ನೀಚತನದ ರಾಜಕಾರಣವಾಗಿದೆ.ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯವನ್ನು ನಾವು ಸಹಿಸುವುದಿಲ್ಲ ಎಂದರು.

ಈಗಾಗಲೇ  ಸಾಕಷ್ಟು ನೊಂದು ಬೆಂದಿರುವ ಹೆಣ್ಣು ಮಗಳನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದೇವೆ.ರಾಜಕಾರಣದಲ್ಲಿ ಕಣ್ಣು ಬಿಡುತ್ತಿರುವ ಅಭ್ಯರ್ಥಿ ಮೇಲೆ ಎಫ್‌ಐಆರ್‌ ದಾಖಲಿಸಿ ಪೊಲೀಸರು ಹಾಗೂ ಸರ್ಕಾರ ಅಧಿಕಾರದ ದುರ್ಬಳಕೆ ಮಾಡಿಕೊಂಡಿದೆ.ಇಂತಹ ನೀಚ ರಾಜಕಾರಣವನ್ನು ನಾನೆಂದೂ ನೋಡಿಲ್ಲ.ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಕಿಡಿಕಾರಿದರು.

ಈ ಬಗ್ಗೆ ಮುಖ್ಯಮಂತ್ರಿ  ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿರುವ ಡಿಕೆಶಿ, ಎಫ್ಐಆರ್ ಪ್ರಕರಣದ ಬಗ್ಗೆ ಕಾನೂನಾತ್ಮಕವಾಗಿ ಹಾಗೂ ಚುನಾವಣಾ ಆಯೋಗಕ್ಕೂ ದೂರು ನೀಡಲಿದ್ದೇವೆ ಎಂದು  ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

ಪ್ರೇಮಿಗಳ ದಿನಾಚರಣೆಗೆ ಕ್ಷಣಗಣನೆ: ಹಾರ್ದಿಕ್ ಪಾಂಡ್ಯಗೆ ಮಹಿಕಾ ಕೊಟ್ಟ 'ಸ್ಪೆಷಲ್ ಗಿಫ್ಟ್' ಏನು ಗೊತ್ತಾ? Video

5,000 ಕೊಟ್ಟರೂ ತಗೋಳಿ, ಆದರೆ ಅವರಿಗೆ ಶಿಳ್ಳೆ ಹೊಡೆದು ಹೇಳಿ': DMK ವಿರುದ್ಧ TVK ಮುಖ್ಯಸ್ಥ ವಿಜಯ್ ವಾಗ್ದಾಳಿ

ಚುನಾವಣೆ ಹೊಸ್ತಿಲಲ್ಲೇ TN ಮಹಿಳೆಯರಿಗೆ ಬಂಪರ್: 1.31 ಕೋಟಿ ಖಾತೆಗಳಿಗೆ 5 ಸಾವಿರ ಜಮೆ; ಮತ್ತೆ ಅಧಿಕಾರಕ್ಕೆ ಬಂದರೆ 2 ಸಾವಿರ - ಸಿಎಂ ಸ್ಟಾಲಿನ್

SCROLL FOR NEXT