ಉಪಚುನಾವಣೆಯಲ್ಲಿ ಹೊಸ ಮುಖಗಳು 
ರಾಜಕೀಯ

ಉಪ ಚುನಾವಣಾ ಕಣದಲ್ಲಿ ಹೊಸಬರ ಜಿದ್ದಾಜಿದ್ದಿನ ಹೋರಾಟ!

ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪಚುನಾವಣಾ ಕಣದಲ್ಲಿ ಆರು ಮಂದಿ ಅಭ್ಯರ್ಥಿಗಳಿದ್ದು ಹೆಚ್ಚಿನವರು ಹೊಸಬರಾಗಿದ್ದಾರೆ. ಎರಡು ಕ್ಷೇತ್ರಗಳ ಚುನಾವಣೆಗೆ ಮೂರು ಪಕ್ಷಗಳ ಆರು ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.

ಬೆಂಗಳೂರು: ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪಚುನಾವಣಾ ಕಣದಲ್ಲಿ ಆರು ಮಂದಿ ಅಭ್ಯರ್ಥಿಗಳಿದ್ದು ಹೆಚ್ಚಿನವರು 
ಹೊಸಬರಾಗಿದ್ದಾರೆ. ಎರಡು ಕ್ಷೇತ್ರಗಳ ಚುನಾವಣೆಗೆ ಮೂರು ಪಕ್ಷಗಳ ಆರು ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.

ಆರು ಮಂದಿಯಲ್ಲಿ ಐವರು ಹೊಸಬರಾಗಿದ್ದಾರೆ, ಪಕ್ಷಕ್ಕೂ ಮತ್ತು ರಾಜಕೀಯಕ್ಕೆ ಹೊಸಬರಾಗಿದ್ದಾರೆ. ಬದ್ಧತೆಗಳನ್ನು ಪೂರೈಸುವುದರಿಂದ ಹಿಡಿದು ಅನುಕಂಪದ ಅಲೆ ಮೇಲೆ ಮತ ಗಳಿಸಲು ಅಭ್ಯರ್ಥಿಗಳು ಮುಂದಾಗಿದ್ದಾರೆ.ಈ ಚುನಾವಣೆಯಲ್ಲಿ ಹೊಸ ತಂತ್ರಗಳನ್ನು ಬಳಸಲು ಮೂರು ಪಕ್ಷಗಳು ಮುಂದಾಗಿವೆ.

ಆರ್ ಆರ್ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಚುನಾವಣೆ ಮತ್ತು ರಾಜಕೀಯಕ್ಕೆ ಹೊಸಬರಲ್ಲ, ಇದೇ ಕ್ಷೇತ್ರದಿಂದ ಈ ಮೊದಲು ಸ್ಪರ್ಧಿಸಿ ಗೆದ್ದಿದ್ದರು,ಆದರೆ ಈ ಮೊದಲು ಬಿಜೆಪಿ ಟಿಕೆಟ್ ನಿಂದ ಸ್ಪರ್ಧಿಸುತ್ತಿದ್ದಾರೆ.

ಆರ್ ಆರ್ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಗೆಲ್ಲುವ ವಿಶ್ವಾಸದಲ್ಲಿದ್ದಾರೆ, ಪಕ್ಷದಿಂದ ಕಣಕ್ಕಿಳಿಯಲು ಯಾವುದೇ ಅಭ್ಯರ್ಥಿ ಇಲ್ಲದಿದ್ದಾಗ ಕುಸುಮಾ ಹೆಸರು ಅಂತಿಮವಾಯಿತು. ಹಲವು ವರ್ಷಗಳಿಂದ ಕಾಂಗ್ರೆಸ್ ಟಿಕೆಟ್ ನಿಂದ ಸ್ಪರ್ಧಿಸಲು ಕುಸುಮಾ ತಂದೆ ಹನುಮಂತರಾಯಪ್ಪ ಕಾಯುತ್ತಿದ್ದರು,  ಆದರೆ ಮುನಿರತ್ನ ಅವರ ಹಣ ಮತ್ತು ತೋಳ್ಬಲಕ್ಕೆ ಸವಾಲು ಹಾಕಲು ಕುಸುಮಾ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ,  ಕುಸುಮಾ ವಿದ್ಯಾವಂತೆ, ಸ್ವತಂತ್ರ್ಯ ಮಹಿಳೆಯಾಗಿದ್ದಾರೆ. ದಿವಂಗತ ಐಎಎಸ್ ಅಧಿಕಾರಿ ಡಿಕೆ ರವಿ ಅವರ ಪತ್ನಿಯಾಗಿರುವ ಕುಸುಮಾ ಅತಿ ಚಿಕ್ಕ ವಯಸ್ಸಿನಲ್ಲೇ ಪತಿ ಕಳೆದುಕೊಂಡಿದ್ದಾರೆ.

2018ರ ಚುನಾವಣೆಯಲ್ಲಿನ ವೈಫಲ್ಯದದಿಂದ ಅನುಭವಿಸಿದ ಅವಮಾನದಿಂದ  ಹೊರಬರಲು ಹಾಗೂ ತಳಮಟ್ಟದ ಕಾರ್ಯಕರ್ತರಿಗೆ ಜೆಡಿಎಸ್ ಮನ್ನಣೆ ನೀಡುತ್ತದೆ ಎಂಬುದನ್ನು ಮನದಟ್ಟು ಮಾಡಲು ಮುಂದಾಗಿರುವ ವರಿಷ್ಠರು ಕೃಷ್ಣಮೂರ್ತಿ ಅವರನ್ನು ಕಣಕ್ಕಿಳಿಸಿದೆ.

ಕೃಷ್ಣಮೂರ್ತಿ ಸ್ಥಳೀಯ ಕಾರ್ಯಕರ್ತರಾಗಿದ್ದು,  ಬಿಬಿಎಂಪಿ ಯ ನಾಮ ನಿರ್ದೇಶಿತ ಸದಸ್ಯರಾಗಿದ್ದಾರೆ.  ಅವರು ಕೂಡ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದಾರೆ.

ಶಿರಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರಿಗೂ ಕೂಡ ಇದು ಮೊದಲ ಚುನಾವಣೆ, ಅನುಕಂಪದ ಮೇಲೆ ಮತ ಪಡೆಯಲು ಜೆಡಿಎಸ್ ಬಯಸಿದೆ. ಬಿಜೆಪಿ ಅಭ್ಯರ್ಥಿಯಾಗಿರುವ ರಾಜೇಶ್ ಗೌಡ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ಪ್ರಯತ್ನಿಸಿತ್ತು, ಆದರೆ ಸಫಲವಾಗಲಿಲ್ಲ, ರಾಜೇಶ್ ಗೌಡ ಬಿಜೆಪಿ ಟಿಕೆಟ್ ನಿಂದ ಕಣಕ್ಕಿಳಿದಿದ್ದಾರೆ.ಅದಾದ ನಂತರ ದಿವಂಗತ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರನ್ನು ಜೆಡಿಎಸ್ ಮನವೊಲಿಸಿತು, ಆದರೆ ಅಮ್ಮಾಜಮ್ಮ ಅವರು ತಮ್ಮ ಪುತ್ರನಿಗೆ ಟಿಕೆಟ್ ನೀಡುವಂತೆ
ಬಯಸಿದ್ದರು. 

ಶಿರಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿಬಿ ಜಯಚಂದ್ರ 10ನೇ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಶಿರಾ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಮೊದಲ ಬಾರಿಗೆ ಉಪ ಚುನಾವಣೆಯಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

ನಾವು ಬಿಟ್ಟರು ಧರ್ಮ, ಜಾತಿ ನಮ್ಮನ್ನು ಬಿಡುವುದಿಲ್ಲ: ಒಕ್ಕಲಿಗನಾಗಿ ಹುಟ್ಟಿದ್ದೇನೆ; ಅಶೋಕಣ್ಣನಿಗೆ ಬ್ಯಾಡ್ಜ್ ಕಳಿಸುತ್ತೇನೆ ಹಾಕಿಕೊಳ್ಳಲಿ; DKS

ಅಮೆರಿಕ ಶಕ್ತಿ ಕೇಂದ್ರ ಶ್ವೇತಭವನ ಬಳಿ ಇಬ್ಬರು ಯುಎಸ್ ರಾಷ್ಟ್ರೀಯ ಗಾರ್ಡ್ ಗಳ ಮೇಲೆ ಗುಂಡಿನ ದಾಳಿ: ಶಂಕಿತನ ಗುರುತು ಪತ್ತೆ

SCROLL FOR NEXT