ಲಕ್ಷ್ಮಣ ಸವದಿ 
ರಾಜಕೀಯ

ಖಾತೆ ಬದಲಾವಣೆ ತಪ್ಪಲ್ಲ, ಒಳ್ಳೆಯ ಕೆಲಸ ಆಗಬೇಕೆಂದು ಈ ತೀರ್ಮಾನ ಮಾಡಲಾಗಿದೆ: ಸವದಿ

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ಸಂಪುಟ ಮೂವರು ಸಚಿವರ ಖಾತೆ ಬದಲಾವಣೆ ಮಾಡಿರುವುದು ತಪ್ಪಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಅಭಿಪ್ರಾಯಪಟ್ಟಿದ್ದಾರೆ.

ಬೆಳಗಾವಿ: ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ಸಂಪುಟ ಮೂವರು ಸಚಿವರ ಖಾತೆ ಬದಲಾವಣೆ ಮಾಡಿರುವುದು ತಪ್ಪಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಅಭಿಪ್ರಾಯಪಟ್ಟಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಒಳ್ಳೆಯ ಕೆಲಸ ಆಗಬೇಕೆಂದು ಈ ತೀರ್ಮಾನ ಮಾಡಲಾಗಿದೆ’ ವರಿಷ್ಠರ ಸಲಹೆ ಪಡೆದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂಪುಟದ ಕೆಲವು ಸಹೋದ್ಯೋಗಿಗಳ ಖಾತೆ ಬದಲಿಸಿದ್ದಾರೆ. ಖಾತೆಗಳನ್ನು ಅದಲು–ಬದಲು ಮಾಡುವ ಅಧಿಕಾರ ಅವರಿಗಿದೆ. ಈ ಬಗ್ಗೆ ಕಾಂಗ್ರೆಸ್‌ನವರೇಕೆ ತಲೆಕೆಡಿಸಿಕೊಳ್ಳಬೇಕು?’ ಎಂದು ಪ್ರಶ್ನಿಸಿದ್ದಾರೆ.

‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ಕಾರದ ವಿರುದ್ಧ ಮಾಡುತ್ತಿರುವ ಆರೋಪಗಳಲ್ಲಿ ಹರುಳಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಇದ್ದಾಗ ಎರಡು ವರ್ಷಗಳವರೆಗೆ ಶಿವಕುಮಾರ್‌ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡಿರಲಿಲ್ಲ. ಹಾಗಾದರೆ ಅವರು ಅಸಮರ್ಥರು ಎನ್ನುವ ಕಾರಣಕ್ಕೆ ಬಿಟ್ಟಿದ್ದರೇ? ಕೆಲವು ಸನ್ನಿವೇಶದಲ್ಲಿ ಖಾತೆ ಬದಲಾವಣೆ ಮಾಡಬೇಕಾಗುತ್ತದೆ’ ಎಂದು ತಿರುಗೇಟು ನೀಡಿದ್ದಾರೆ.

‘ಉಪ ಚುನಾವಣೆಗಳಲ್ಲಿ ಜನರು ಆಡಳಿತ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವುದು ಸಾಮಾನ್ಯ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!