ರಾಜಕೀಯ

ನನ್ನನ್ನು ಕೆಣಕಿದರೆ ಸುಮ್ಮನಿರುವುದಿಲ್ಲ: ಸಿದ್ದರಾಮಯ್ಯಗೆ ಎಚ್ ಡಿಕೆ ಎಚ್ಚರಿಕೆ

Nagaraja AB

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ರಾಜಕೀಯ ತೆವಲಿಗೆ ಪದೇಪದೇ ನನ್ನನ್ನು ಕೆಣಕಿದರೆ ಸುಮ್ಮನಿರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮೈತ್ರಿ ಸರ್ಕಾರದಲ್ಲಿ ಜಾತಿ ಜನಗಣತಿ ಸಮೀಕ್ಷೆ ಬಿಡುಗಡೆಗೆ ಕುಮಾರಸ್ವಾಮಿ ಅಡ್ಡಗಾಲು ಹಾಕಿದ್ದರು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು. 

ನನ್ನ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದರಬೇಕು, ನಿಮ್ಮ ತೆವಲಿಗೆ ಸಮಾಜಗಳನ್ನು ನನ್ನ ವಿರುದ್ಧ ಎತ್ತಿಕಟ್ಟುವ ಪ್ರಯತ್ನ ಮಾಡಬೇಡಿ ಎಂದರು.

ಮೈತ್ರಿ ಸರ್ಕಾರದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಒಂದು ದಿನವೂ ಕೂಡ ಜಾತಿಗಣತಿ ಸಮೀಕ್ಷೆ ವಿಚಾರ ಚರ್ಚೆಯೇ ಮಾಡಿಲ್ಲ. ಕಾಂಗ್ರೆಸ್ ನ ಮಂತ್ರಿಗಳು ಕೂಡ ಈ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಆದರೆ ಈಗ ನನ್ನ ಹೆಸರು ಹೇಳಿ ಸುಳ್ಳು ಹೇಳುತ್ತಿದ್ದಾರೆಂದು ಕಿಡಿಕಾರಿದರು.

SCROLL FOR NEXT