ನಂಜಾವಧೂತ ಸ್ವಾಮೀಜಿ ಭೇಟಿ ಮಾಡಿದ ಜಯಚಂದ್ರ 
ರಾಜಕೀಯ

ಶಿರಾ ಉಪಚುನಾವಣೆ: ಸ್ವಾಮೀಜಿ ಭೇಟಿ ಮಾಡಿದ ಜಯಚಂದ್ರ; ಬಿಜೆಪಿಯಿಂದ ಸಣ್ಣ ಸಮುದಾಯಗಳ ಮತ ಬೇಟೆ

ಶಿರಾ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ಪಟ್ಟನಾಯಕನಹಳ್ಳಿ ಮಠಕ್ಕೆ ಭೇಟಿ ನೀಡಿ ಕುಂಚಟಿಗ ಒಕ್ಕಲಿಗ ಸ್ವಾಮೀಜಿ ನಂಜಾವಧೂತ ಶ್ರೀಗಳ ಆಶೀರ್ವಾದ ಪಡೆದರು.

ತುಮಕೂರು: ಶಿರಾ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ಪಟ್ಟನಾಯಕನಹಳ್ಳಿ ಮಠಕ್ಕೆ ಭೇಟಿ ನೀಡಿ ಕುಂಚಟಿಗ ಒಕ್ಕಲಿಗ ಸ್ವಾಮೀಜಿ ನಂಜಾವಧೂತ ಶ್ರೀಗಳ ಆಶೀರ್ವಾದ ಪಡೆದರು.

ಮಾಜಿ ಸಚಿವ ಎಚ್ ಆಂಜನೇಯ ಜಯಚಂದ್ರ ಪರ ಪ್ರಚಾರ ನಡೆಸಿ ದಲಿತ ಸಮುದಾಯದ ಜೊತೆ ಸಭೆ ನಡೆಸಿದರು. 

ಇನ್ನು ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಸೂಚನೆ ಮೇರೆಗೆ ಬಿಜೆಪಿ ಮಾಜಿ ವಕ್ತಾರ ಹಾಗೂ ಮಡಿವಾಳ ಸುಮದಾಯದ ಪ್ರಮುಖ ಮುಖಂಡ  ರಘು ಕೌಟಿಲ್ಯ ಶಿರಾಗೆ ಭೇಟಿ ನೀಡಿ ಸಣ್ಣ ಸಣ್ಣ ಸಮುದಾಯಗಳ ಜೊತೆ ಸಭೆ ನಡೆಸಿದರು.

ಕಾಯಕ ಸಮುದಾಯ ಶಿರಾದ ಮತ ಬ್ಯಾಂಕ್ ಆಗಿದೆ. ಆದರೆ ಚುನಾವಣಾ ಫಲಿತಾಂಶದಲ್ಲಿ ಮಹತ್ವದ ಪಾತ್ರ ವಹಿಸಲಿದೆ, ಭಾನುವಾರ ವಿಜಯೇಂದ್ರ ಸಮ್ಮುಖಧಲ್ಲಿ ಹಲವು ಮಂದಿ ಬಿಜೆಪಿ ಸೇರಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪತ್ನಿ ಮೈತ್ರಾ ದೇವಿ ಅವರ ವರ್ಷದ ತಿಥಿ ಅಂಗವಾಗಿ ವಿಜಯೆಂದ್ರ ಅವರು ಶಿರಾ ಉಪಚುನಾವಣೆ ಪ್ರಚಾರದಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಶಿಕಾರಿಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, ಮಂಗಳವಾರದಿಂದ ಮತ್ತೆ ಪ್ರಚಾರ ಕಾರ್ಯಕ್ಕೆ ಆಗಮಿಸಲಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT