ಕೃಷ್ಣಮೂರ್ತಿ-ಕುಮಾರಸ್ವಾಮಿ 
ರಾಜಕೀಯ

ನಾನು ಈ ಕ್ಷೇತ್ರದ ಮಗ, ಆರ್‌ಆರ್‌ ನಗರದಲ್ಲಿ ಗೆಲುವು ನನ್ನದೇ: ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ವಿಶ್ವಾಸ

ನಾನು ಈ ಕ್ಷೇತ್ರದ ಮಗ ನಿಮ್ಮೆಲ್ಲರ ಕಷ್ಟ ಸುಖಗಳನ್ನು ನೋಡಿಕೊಂಡೇ ಬೆಳೆ ದವನು. ಜೆಡಿಎಸ್‌ ಕಾರ್ಯಕರ್ತರು ಯಾವುದಕ್ಕೂ ಹೆದರಬೇಕಿಲ್ಲ. ಈ ಚುನಾವಣೆಯಲ್ಲಿ ನಾವೇ ಗೆಲ್ಲುವುದು ಎಂದು ರಾಜರಾಜೇಶ್ವರಿ ನಗರ ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ ವಿ. ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು: ನಾನು ಈ ಕ್ಷೇತ್ರದ ಮಗ ನಿಮ್ಮೆಲ್ಲರ ಕಷ್ಟ ಸುಖಗಳನ್ನು ನೋಡಿಕೊಂಡೇ ಬೆಳೆ ದವನು. ಜೆಡಿಎಸ್‌ ಕಾರ್ಯಕರ್ತರು ಯಾವುದಕ್ಕೂ ಹೆದರಬೇಕಿಲ್ಲ. ಈ ಚುನಾವಣೆಯಲ್ಲಿ ನಾವೇ ಗೆಲ್ಲುವುದು ಎಂದು ರಾಜರಾಜೇಶ್ವರಿ ನಗರ ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ ವಿ. ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಆರ್‌ಆರ್‌ ನಗರ ವ್ಯಾಪ್ತಿಯ ಸಜ್ಜೆಪಾಳ್ಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರು ಯಾವುದಕ್ಕೂ ಹೆದರಬೇಕಿಲ್ಲ. ನಾನು ಎಂದೆಂದಿಗೂ ನಿಮ್ಮ ಜೊತೆ ಇರುತ್ತೇನೆ. ಬಿಜೆಪಿ-ಕಾಂಗ್ರೆಸ್‌ನವರು ಎಷ್ಟೇ ಜನರನ್ನು ಜೆಡಿಎಸ್‌ನಿಂದ ಸೇರಿಸಿಕೊಂಡರು ನಮ್ಮ ಮೇಲೆ ಯಾವ ಪರಿಣಾಮ ಬೀರಲ್ಲ. ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಟ ಮುಂದುವರಿಸೋಣ ಎಂದು ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಿದರು.

ಬೆಳಗಿನಿಂದಲೇ ಬಿರುಸಿನ ಪ್ರಚಾರ ನಡೆಸಿದ ಕೃಷ್ಣಮೂರ್ತಿ, ಬಿಇಎಂಎಲ್‌ ಲೇಔಟ್‌ನ ಮಾರುತಿ ದೇವಸ್ಥಾನದ ಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದಿನವಿಡೀ ಪ್ರೆಸ್ ಲೇಔಟ್ ಪಾರ್ಕ್, ಬಿಇಎಂಎಲ್‌ ಲೇಔಟ್‌, ಲಗ್ಗೆರೆ, ಕೊಟ್ಟಿಗೆಪಾಳ್ಯ ಹಾಗೂ ಜ್ಞಾನಭಾರತಿ ವಾರ್ಡ್‌ಗಳಲ್ಲಿ ಮನೆ-ಮನೆಗೆ ಭೇಟಿ ನೀಡಿ ಮತಯಾಚಿಸಿದರು. ಅಭ್ಯರ್ಥಿಗೆ ಜೆಡಿಎಸ್‌ ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್‌.ಪ್ರಕಾಶ್‌ ಸೇರಿ ಅನೇಕ ಮುಖಂಡರು ಸಾಥ್‌ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

IPL 2026 Qualifier 1: ಐಪಿಎಲ್ ಇತಿಹಾಸದ ಅತ್ಯಪರೂಪದ ದಾಖಲೆ ಬರೆದ Virat Kohli; ಡಬಲ್ ಆಘಾತ ಕೊಟ್ಟ Holder

ಕರ್ನಾಟಕ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ಘೋಷಣೆ; ಜೂನ್ 18 ರಂದು ಮತದಾನ

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು ಮೆಟ್ರೋ ಸಂಚಾರ ವ್ಯತ್ಯಯ!

SCROLL FOR NEXT