ಉಗ್ರಪ್ಪ 
ರಾಜಕೀಯ

'ಆಪರೇಷನ್ ಕಮಲ' ತನಿಖೆ ನಡೆದರೆ ಮೀರ್ ಸಾಧಿಕ್ ಯಾರು ಎಂದು ಗೊತ್ತಾಗುತ್ತದೆ: ವಿ.ಎಸ್. ಉಗ್ರಪ್ಪ

ರಾಜ್ಯದಲ್ಲಿ ನಡೆದ ಆಪರೇಷನ್ ಕಮಲದ ತನಿಖೆಯನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿದರೆ ನಿಜವಾದ ಮೀರ್ ಸಾದಿಕ್ ಯಾರು ಎನ್ನುವುದು ಪತ್ತೆಯಾಗುತ್ತದೆ ಎಂದು ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ವಿ.ಎಸ್. ಉಗ್ರಪ್ಪ ಹೇಳಿದ್ದಾರೆ

ಬೆಂಗಳೂರು: ರಾಜ್ಯದಲ್ಲಿ ನಡೆದ ಆಪರೇಷನ್ ಕಮಲದ ತನಿಖೆಯನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿದರೆ ನಿಜವಾದ ಮೀರ್ ಸಾದಿಕ್ ಯಾರು ಎನ್ನುವುದು ಪತ್ತೆಯಾಗುತ್ತದೆ ಎಂದು ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ವಿ.ಎಸ್. ಉಗ್ರಪ್ಪ ಹೇಳಿದ್ದಾರೆ. 

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿರುವ ಬಗ್ಗೆ ತನಿಖೆ ನಡೆಸಲಿ. ಇಲ್ಲಿ ಮೀರ್ ಸಾದಿಕ್ ಯಾರು ಎನ್ನುವುದನ್ನು ನಾವು ಸಾಬೀತು ಪಡಿಸುತ್ತೇವೆ. ನಮ್ಮ ಆರೋಪ ಸುಳ್ಳಾದರೆ ನೀವು ಹೇಳಿದ ಶಿಕ್ಷೆ ಅನುಭವಿಸಲು ನಾವು ಸಿದ್ಧವಿದ್ದೇವೆ. ಒಂದೊಮ್ಮೆ ಭ್ರಷ್ಟಾಚಾರದಿಂದ ಅಧಿಕಾರಕ್ಕೆ ಬಂದಿದೆ ಎನ್ನುವುದು ಸಾಬೀತಾದರೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸವಾಲು ಹಾಕಿದರು. 

ಕಳೆದ ಒಂದು ವರ್ಷ ಅವಧಿಯಲ್ಲಿ ಮುನಿರತ್ನ ಆಸ್ತಿ ಮೊತ್ತ 35 ಕೋಟಿ ರೂ. ಹೆಚ್ಚಳವಾಗಿದೆ. ಇವರ ಆಸ್ತಿ ವರ್ಷಕ್ಕೆ ಐದಾರು ಕೋಟಿಗಿಂತ ಹೆಚ್ಚು ಆಗುತ್ತಿಲ್ಲ. ಏಕಾಏಕಿ ಇಷ್ಟು ಸಂಪಾದಿಸಿದ್ದು ಹೇಗೆ? ಎಷ್ಟೇ ಸಿನಿಮಾ ಮಾಡಿದ್ದರೂ ಅಷ್ಟೊಂದು ಸಂಪಾದಿಸಲು ಸಾಧ್ಯವಿಲ್ಲ. ಈ ಹೆಚ್ಚಳದ ಮೊತ್ತ ಆಪರೇಷನ್ ಕಮಲದಿಂದ ಬಂದ ಹಣವಾಗಿದೆ.

ಕಪ್ಪು ಹಣವನ್ನು ಬೇರೆ ಬೇರೆ ರೀತಿ ಪರಿವರ್ತಿಸಿಕೊಂಡಿದ್ದಾರೆ. ಇಲ್ಲಿ ದೊಡ್ಡ ಮೊತ್ತದ ಭ್ರಷ್ಟಾಚಾರವಾಗಿದೆ. ರಾಜ್ಯ ಚುನಾವಣಾ ಆಯೋಗ ಪಾರದರ್ಶವಾಗಿದ್ದರೆ ಇದೇ ವಿಚಾರವಾಗಿ ರಾಜ್ಯ ಸರ್ಕಾರ ಹಾಗೂ ಮುನಿರತ್ನ ವಿರುದ್ಧ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT