ಸಾಂದರ್ಭಿಕ ಚಿತ್ರ 
ರಾಜಕೀಯ

ಶಿರಾದಲ್ಲಿ ಮುಸ್ಲಿಂ ಮತದಾರರಿಗೆ ಕಾಂಗ್ರೆಸ್- ಜೆಡಿಎಸ್ ಗಾಳ: ಬಹುಸಂಖ್ಯಾತ ಹಿಂದೂಗಳ ಓಲೈಕೆಯಲ್ಲಿ ಬಿಜೆಪಿ ಮಗ್ನ!

ಶಿರಾ ಉಪ ಚುನಾವಣೆ ಪ್ರಚಾರ ಬಿರುಸಾಗಿದ್ದು ಮೂರು ಪ್ರಮುಖ ಪಕ್ಷಗಳ ನಾಯಕರು ಶಿರಾ ನಗರ ಪ್ರಚಾರದ ಕಡೆ ಹೆಚ್ಚು ಗಮನ ಹರಿಸಿದ್ದಾರೆ. 

ತುಮಕೂರು: ಶಿರಾ ಉಪ ಚುನಾವಣೆ ಪ್ರಚಾರ ಬಿರುಸಾಗಿದ್ದು ಮೂರು ಪ್ರಮುಖ ಪಕ್ಷಗಳ ನಾಯಕರು ಶಿರಾ ನಗರ ಪ್ರಚಾರದ ಕಡೆ ಹೆಚ್ಚು ಗಮನ ಹರಿಸಿದ್ದಾರೆ. 

16ನೇ ಶತಮಾನದಲ್ಲಿ ಮೊಘಲರ ಆಡಳಿತದಲ್ಲಿ ಪ್ರಧಾನ ಕಚೇರಿಯಾಗಿದ್ದ ಶಿರಾ ಪಟ್ಟಣದಲ್ಲಿ ಅಲ್ಪ ಸಂಖ್ಯಾತ ಸಮುದಾಯದ ಮತಗಳು ಗಣನೀಯ ಸಂಖ್ಯೆಯಲ್ಲಿವೆ.

ಬಿಜೆಪಿ ಹೆಚ್ಚಿನ ಸಂಖ್ಯೆಯ ಹಿಂದೂ ಮತಕ್ಕೆ ಗಾಳ ಹಾಕುತ್ತಿದ್ದರೇ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಅಲ್ಪ ಸಂಖ್ಯಾತ ಮತಗಳು ಪ್ರಮುಖವಾಗಿವೆ. 

ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಈಶ್ವರಪ್ಪ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿ ವೈ ವಿಜಯೇಂದ್ರ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ, ಆದರೆ ಯಾವುದೇ ಧಾರ್ಮಿಕ ವಿಷಯಗಳನ್ನು ಅವರು ಮಾತನಾಡುತ್ತಿಲ್ಲ,  ಅದರ ಬದಲಿಗೆ ಬಿಜೆಪಿ ಅಭ್ಯರ್ಥಿ ರಾಜೇಶ್ ಗೆದ್ದರೇ ಮಾಡಲಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾತನಾಡುತ್ತಿದ್ದಾರೆ.

ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಮುಸ್ಲಿಮರು ಅಧಿಕ ಸಂಖ್ಯೆಯಲ್ಲಿರುವ ಪ್ರದೇಶಗಳಲ್ಲಿ ಟಿ,ಬಿ ಜಯಚಂದ್ರ ಪರ ಪ್ರಚಾರ ನಡೆಸುತ್ತಿದ್ದಾರೆ. ಇನ್ನೂ ಜೆಡಿಎಸ್ ಮುಖಂಡ ಎಚ್.ಡಿ ದೇವೇಗೌಡರು ಮುಸ್ಲಿಂ ಸಮುದಾಯವಿರುವ ಪ್ರದೇಶಗಳಲ್ಲಿ ಪ್ರಚಾರ ನಡೆಸಿದರು.

ಇನ್ನೂ ಮಾಜಿ ಸಿಎಂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಸಮುದಾಯ ಇರುವ ಪ್ರದೇಶದಲ್ಲಿ ಅದರಲ್ಲೂ ವಿಶೇಷವಾಗಿ ಕಾಡುಗೊಲ್ಲರ ಸ್ಥಳಗಳಲ್ಲಿ ಪ್ರಚಾರ ನಡೆಸಿದರು. 

ನಾನು ಸಿಎಂ ಆಗಿದ್ದಾಗ ಕಾಡುಗೊಲ್ಲ ಜನಾಂಗವನ್ನು ಸಮುದಾಯದ ಪಟ್ಟಿಗೆ ಸೇರಿಸಿದ್ದೆ ಮತ್ತು ಕೇಂದ್ರ ಸರ್ಕಾರಕ್ಕೆ ಕಾಡುಗೊಲ್ಲ ಸಮುದಾಯವನ್ನು ಎಸ್ ಟಿ ಕೆಟಗರಿಗೆ ಸೇರಿಸುವಂತೆ ಮನವಿ ಮಾಡುತ್ತೇನೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಡುಗೊಲ್ಲ ಸಮುದಾಯದ ಒಬ್ಬ ನಾಯಕನಿಗೆ ಟಿಕೆಟ್ ನೀಡುವುದಾಗಿ ಸಿದ್ದರಾಮಯ್ಯ ಆಶ್ವಾಸನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT