ನಿಖಿಲ್ ಕುಮಾರಸ್ವಾಮಿ 
ರಾಜಕೀಯ

ಶಿರಾ ಉಪಚುನಾವಣೆ: ಅಖಾಡಕ್ಕೆ ಧುಮುಕಿದ ನಿಖಿಲ್ ಕುಮಾರಸ್ವಾಮಿ

ರಾಜ್ಯದ ತುಮಕೂರು ಜಿಲ್ಲೆಯ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರದ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ರಾಜ್ಯದ ಪ್ರಮುಖ ಮೂರು ಪಕ್ಷಗಳಾಗಿರುವ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಬಿರುಸಿನ ಪ್ರಚಾರ ಕಾರ್ಯ ಆರಂಭಿಸಿವೆ. 

ತುಮಕೂರು: ರಾಜ್ಯದ ತುಮಕೂರು ಜಿಲ್ಲೆಯ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರದ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ರಾಜ್ಯದ ಪ್ರಮುಖ ಮೂರು ಪಕ್ಷಗಳಾಗಿರುವ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಬಿರುಸಿನ ಪ್ರಚಾರ ಕಾರ್ಯ ಆರಂಭಿಸಿವೆ. 

ಈ ನಡುವೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ಜೆಡಿಎಸ್ ಪಕ್ಷದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಕೂಡ ಪ್ರಚಾರ ಕಾರ್ಯಕ್ಕೆ ಧುಮುಕಿದ್ದಾರೆ. 

ಶನಿವಾರ ಜಿಲ್ಲೆಯ ಪಟ್ಟನಾಯಕನಹಳ್ಳಿ ಮಠಕ್ಕೆ ಭೇಟಿ ನೀಡಿದ ಕುಮಾರಸ್ವಾಮಿಯವರು, ಪಟ್ಟನಾಯಕನಹಳ್ಳಿ ಮಠದ ನಂಜಾವಧೂತ ಸ್ವಾಮೀಜಿಗಳ ಆಶೀರ್ವಾರ ಪಡೆದು ಬಳಿಕ ಪ್ರಚಾರ ಕಾರ್ಯ ಆರಂಭಿಸಿದರು. 

ಕಳೆದ ಏಪ್ರಿಲ್ ತಿಂಗಳಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಿಖಿಲ್ ಅವರು, ವಿವಾಹವಾದ ಬಳಿಕ ಮೊದಲ ಬಾರಿಗೆ ರಾಜಕೀಯ ಪ್ರವಾಸ ಕೈಗೊಂಡಿದ್ದಾರೆ. 

ಕ್ಷೇತ್ರ ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಸುತ್ತಿರುವ ಜೆಡಿಎಸ್ ಜನರ ಮನವೊಲಿಸಲು ಸಾಕಷ್ಟು ಪ್ರಚಾರಗಳನ್ನು ನಡೆಸುತ್ತಿದೆ. ಗುರುವಾರವಷ್ಟೇ ಪ್ರಜ್ವಲ್ ಅವರು ಬೈಕ್ ರ್ಯಾಲಿ ನಡೆಸಿದ್ದರು. ದೇವೇಗೌಡ ಅವರೂ ಕೂಡ ಶಿರಾದಲ್ಲಿಯೇ ಉಳಿದುಕೊಂಡಿದ್ದು, ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. 

2019 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ನಿಖಿಲ್ ಅವರು, ಸುಮಲತಾ ಅಂಬರೀಶ್ ವಿರುದ್ಧ ಸೋಲುಕಂಡಿದ್ದರು. 2016 ರಲ್ಲಿ ಜಾಗ್ವಾರ್ ದ್ವಿಭಾಷಾ ಚಿತ್ರದ ಮೂಲಕ ಸ್ಯಾಂಡಲ್'ವುಡ್'ಗೆ ಪಾದಾರ್ಪಣೆ ಮಾಡಿದ್ದರು. ಆರ್.ಆರ್.ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ನಿರ್ಮಿಸಿದ್ದ ಕನ್ನಡ ಚಿತ್ರ ಕುರುಕ್ಷೇತ್ರದಲ್ಲಿಯೂ ನಿಖಿಲ್ ನಟಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT