ರಾಜಕೀಯ

'ರೈತರ ಪಾಲಿಗೆ ಮರಣಕೂಪದಂತಿದ್ದ ನಿಮ್ಮ ಅವಧಿ ಟಿಪ್ಪು ಆಡಳಿತದಂತಿತ್ತು'

Shilpa D

ಬೆಂಗಳೂರು: ರೈತರ ಪಾಲಿಗೆ ಮರಣಕೂಪದಂತಿದ್ದ ನಿಮ್ಮ ಅವಧಿಯಲ್ಲಿ 3000ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡದ್ದು ದುರ್ದೈವ. ಅನ್ನದಾತರು ಸಾವಿಗೆ ಶರಣಾಗುತ್ತಿದ್ದರೆ ನೀವು ಮಾತ್ರ ನೆಮ್ಮದಿಯಾಗಿ ನಿದ್ರಿಸುತ್ತಿದ್ದಿರಿ, ಅಲ್ಲವೇ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹರಿಹಾಯ್ದಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮ್ಮ ಆಡಳಿತ ರೈತರ ಪಾಲಿಗೆ ಟಿಪ್ಪು ಆಡಳಿತದಂತಿತ್ತು ಬಿಜೆಪಿ ಟೀಕಿಸಿದೆ.

ಮಾನ್ಯ ಸಿದ್ದರಾಮಯ್ಯನವರೇ, ನಿಮ್ಮ ದುರಾಡಳಿತದಲ್ಲಿ ಬೆಳಗಾವಿಯ ರೈತ ವಿಠಲ ಅರಭಾವಿ ಆತ್ಮಹತ್ಯೆಯ ಮಾಡಿಕೊಂಡಾಗ, ‘ರೈತನ ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ, ಚೆನ್ನಾಗಿ ಕುಡಿದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ಹೇಳಿದ್ದಿರಿ. ಒಬ್ಬ ಮುಖ್ಯಮಂತ್ರಿಯಾಗಿ ಆಡುವ ಮಾತೇ ಇದು ಸಿದ್ದರಾಮಯ್ಯ? ಎಂದು ಬಿಜೆಪಿ ಪ್ರಶ್ನಿಸಿದೆ.

ಬಿಜೆಪಿ ಸರ್ಕಾರ ಜನವಿರೋಧಿ ಸರ್ಕಾರ.‌ ಯಡಿಯೂರಪ್ಪ ಚೆಕ್ ಮೂಲಕ ಲಂಚ ಪಡೆಯುತ್ತಿದ್ದರು. ಇದೀಗ ಅವರ ಮಗ ಆರ್ ಟಿ ಜಿ ಎಸ್ ಮೂಲಕ ಲಂಚ ಪಡೆಯುತ್ತಿದ್ದಾರೆ. ಇಂತಹ ಭ್ರಷ್ಟ ಸರ್ಕಾರವನ್ನು ನಾನು ನನ್ನ ರಾಜಕೀಯ ಜೀವನದಲ್ಲಿ ನೋಡಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದರು.
 

SCROLL FOR NEXT