ಸಂಗ್ರಹ ಚಿತ್ರ 
ರಾಜಕೀಯ

ಆರ್'ಆರ್'ನಗರ, ಶಿರಾ ಉಪಚುನಾವಣೆ: ಬಿಜೆಪಿಗೆ ವರದಾನವಾಗಲಿದೆಯೇ ಅಂಚೆ ಮತದಾನ?

ಕೊರೋನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನದ ವೇಳೆ 80 ವರ್ಷ ಮೇಲ್ಪಟ್ಟ ಹಾಗೂ ಅಂಗವಿಕಲರು, ಕೊರೋನಾ ಸೋಂಕಿತರಿಗೆ ಅಂಚೆ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಮಾಡಿಕೊಂಡಿದ್ದು, ಯಾವೆಲ್ಲಾ ಮತದಾರರು ಅಂಚೆ ಮತದಾನದ ಪರವಾಗಿದ್ದಾರೆಂಬುದನ್ನು...

ಬೆಂಗಳೂರು: ಕೊರೋನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನದ ವೇಳೆ 80 ವರ್ಷ ಮೇಲ್ಪಟ್ಟ ಹಾಗೂ ಅಂಗವಿಕಲರು, ಕೊರೋನಾ ಸೋಂಕಿತರಿಗೆ ಅಂಚೆ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಮಾಡಿಕೊಂಡಿದ್ದು, ಯಾವೆಲ್ಲಾ ಮತದಾರರು ಅಂಚೆ ಮತದಾನದ ಪರವಾಗಿದ್ದಾರೆಂಬುದನ್ನು ಕಂಡು ಹಿಡಿಯಲು ರಾಜ್ಯದ ಪ್ರಮುಖ ಮೂರು ಪಕ್ಷಗಳು ಯತ್ನಗಳನ್ನು ನಡೆಸುತ್ತಿವೆ. ಈ ನಡುವೆ ಕೆಲ ತಜ್ಞರು ಅಂಚೆ ಮತದಾನ ಆಡಳಿತಾರೂಢ ಪಕ್ಷದ ಪರವಾಗಿಯೇ ಇರಲಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಶಿರಾ ಹಾಗೂ ರಾಜರಾಜೇಶ್ವರಿ ನಗರದಲ್ಲಿ ಹಿರಿಯರು, ಅಂಗವಿಕಲರು ಹಾಗೂ ಕೊರೋನಾ ಸೋಂಕು ಪೀಡಿತರು, ಸರ್ಕಾರಿ ಅಧಿಕಾರಿಗಳಿಗೆ ಅಂಚೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಶಿರಾದಲ್ಲಿ ಈಗಾಗಲೇ 6,000 ಜನರು ಅಂಚೆ ಮೂಲಕ ಬುಧವಾರ ಹಾಗೂ ಗುರುವಾರ ತಮ್ಮ ಮತಗಳನ್ನು ಹಾಕಿದ್ದು, ಈ ಮತಗಳನ್ನು ಸಂಗ್ರಹಿಸಲಾಗಿದೆ. ರಾಜರಾಜೇಶ್ವರಿ ನಗರದಲ್ಲಿ ಶುಕ್ರವಾರ ಮತಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಚುನಾವಣಾ ಆಯೋಗದ ಸಿಇಒ ಸಂಜೀವ್ ಕುಮಾರ್ ಅವರು ಹೇಳಿದ್ದಾರೆ. 

ರಾಜಕೀಯ ತಜ್ಞರಾಗಿರುವ ಬಿಎಸ್. ಮೂರ್ತಿಯವರು ಮಾತನಾಡಿ, ಇದೇ ಮೊದಲ ಬಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಅಂಚೆ ಮತದಾನದ ಪರವಾಗಿದ್ದಾರೆ. ಅಂಚೆ ಮತದಾನ ಸಾಮಾನ್ಯವಾಗಿ ಆಡಳಿತಾರೂಢ ಪಕ್ಷದ ಪರವಾಗಿಯೇ ಇರುತ್ತದೆ. ಅಂಚೆ ಮೂಲಕ ಬಂದ ಮತಗಳನ್ನು ಎಣಿಕೆ ಮಾಡಲಾಗುತ್ತದೆ. ಅಂಚೆ ಮತದಾನ ಅವಕಾಶ ಇರುವ ಹಿನ್ನೆಲೆಯಲ್ಲಿ ಹೆಚ್ಚೆಚ್ಚು ಜನರು ಮತಹಾಕಲು ಸಹಾಯವಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT