ರಾಜಕೀಯ

ಮಾಜಿ ಸಿಎಂ  ಎಚ್.ಡಿ ಕುಮಾರಸ್ವಾಮಿ ಮತ್ತಿನಲ್ಲಿ ಹೇಳಿಕೆ ನೀಡಿದ್ದಾರಾ? ಸಿ.ಟಿ ರವಿ ತಿರುಗೇಟು!

Shilpa D

ಬೆಂಗಳೂರು: ಡ್ರಗ್ಸ್‌ ಮಾಫಿಯಾದ ಹಣದಿಂದ ಸಮ್ಮಿಶ್ರ ಸರ್ಕಾರ ಪತನವಾಗಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಸಚಿವ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿ ಹೇಳಿಕೆ ನೀಡಿರುವುದನ್ನು ಗಮನಿಸಿದರೆ ಅವರನ್ನು ಪರೀಕ್ಷೆಗೆ ಒಳಪಡಿಸಬೇಕಾದ ಅಗತ್ಯ ಇದೆ ಎಂದರು. ಡ್ರಗ್ಸ್ ಹಣದಿಂದ ಮೈತ್ರಿ ಸರ್ಕಾರ ಪತನವಾಗಿದೆ ಎಂದು ಎಚ್‌ಡಿಕೆ ಹೇಳಿಕೆ ನೀಡುತ್ತಾರೆ. ಹಾಗಾದರೆ ಅವರು ಮುಖ್ಯಮಂತ್ರಿ ಆಗಿದ್ದಾಗ ಸುಮ್ಮನಿದ್ದದ್ದು ಏಕೆ ಎಂದು ಪ್ರಶ್ನಿಸಿದರು.

ಅವರಿಗೆ ಹಾಗೂ ಡ್ರಗ್ಸ್ ಮಾಫಿಯಾಗೆ ಭಾಂದವ್ಯ ಇತ್ತಾ ಎಂದು ಪ್ರಶ್ನಿಸಿದರ ಸಿ.ಟಿ ರವಿ ಅವರನ್ನು ಪರೀಕ್ಷೆಗೆ ಒಳಪಡಿಸುವ ಅಗತ್ಯ ಇದೆ, ಅವರು ಸಹಜ ಸ್ಥಿತಿಯಲ್ಲಿ ಹೇಳಿದ್ದಾರೋ ಅಥವಾ ಮತ್ತಿನಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರಾ ಎಂದು ಕಿಡಿಕಾರಿದರು.
 

SCROLL FOR NEXT