ಹೆಚ್.ಡಿ.ಕುಮಾರಸ್ವಾಮಿ 
ರಾಜಕೀಯ

ರಾಜ್ಯ ಹಣಕಾಸು ಸ್ಥಿತಿಯ ಶ್ವೇತಪತ್ರ ಹೊರಡಿಸಿ: ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಹಣಕಾಸು ಸ್ಥಿತಿಯ ಕುರಿತು ರಾಜ್ಯ ಸರ್ಕಾರ ಶೀಘ್ರಗತಿಯಲ್ಲಿ ಶ್ವೇತಪತ್ರ ಹೊರಡಿಸಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಆಗ್ರಹಿಸಿದ್ದಾರೆ. 

ಬೆಂಗಳೂರು: ಹಣಕಾಸು ಸ್ಥಿತಿಯ ಕುರಿತು ರಾಜ್ಯ ಸರ್ಕಾರ ಶೀಘ್ರಗತಿಯಲ್ಲಿ ಶ್ವೇತಪತ್ರ ಹೊರಡಿಸಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಆಗ್ರಹಿಸಿದ್ದಾರೆ. 
     
ದಿ ನ್ಯೂ ಇಂಡಿಯನ್ ಎಕ್ಸ್'ಪ್ರೆಸ್ ಜೊತೆಗೆ ಮಾತನಾಡಿರುವ ಅವರು, ವಾಣಿಜ್ಯ ತೆರಿಗೆ, ಅಬಕಾರಿ, ಅಂಚೆಚೀಟಿ ಮತ್ತು ನೋಂದಣಿ ಮತ್ತು ಸಾರಿಗೆ ಇಲಾಖೆಗಳು ರಾಜ್ಯ ಖಜಾನೆಗೆ ಮುಖ್ಯ ಕೊಡುಗೆ ನೀಡುವ ಮೂಲಗಳಾಗಿದ್ದು, ಈ ಎಲ್ಲಾ ಕ್ಷೇತ್ರಗಳು ಮಂದಗತಿಯಲ್ಲಿ ಸಾಗುತ್ತಿವೆ. ರಾಷ್ಟ್ರದ ಜಿಡಿಸಿ ದರ ಶೇ.23ರಷ್ಟು ಕುಸಿದಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಮಂದಗತಿಯ ಬೆಳವಣಿಗೆ ರಾಜ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನು ನಾವು ಪರಿಶೀಲಿಸಬೇಕು. ಪರಿಶೀಲನೆ ಬಳಿಕ ಆ ಸಮಸ್ಯೆಯನ್ನು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. 

ಯಾವ ಕ್ಷೇತ್ರಗಳಲ್ಲಿ ಹಣ ದುರ್ಬಳಕೆಯಾಗುತ್ತಿದೆ ಎಂಬುದನ್ನು ಗುರ್ತಿಸಿ ಸರ್ಕಾರ ಅವುಗಳಿಗೆ ಕಡಿವಾಣ ಹಾಕುವ ಕ್ರಮ ಕೈಗೊಳ್ಳಬೇಕಿದೆ. ರಾಜ್ಯ ಸರ್ಕಾರ ಈಗಲಾದರು ಬುದ್ಧಿವಂತಿಕೆಯಿಂದ ಪರಿಸ್ಥಿತಿ ನಿಭಾಯಿಸದೇ ಹೋದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಗಳಿವೆ. ಸರ್ಕಾರದ ಕೆಲವು ಬೇಜವಾಬ್ದಾರಿ ನಿರ್ಧಾರಗಳು ನಮ್ಮ ಗಮನಕ್ಕೆ ಬಂದಿದ್ದು, ಈ ಬಗ್ಗೆ ತೆಗೆದುಕೊಳ್ಳಬೇಕಾದ ನಿಲುವಿನ ಬಗ್ಗೆ ಚಿಂತನೆ ನಡೆಸುತ್ತೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!