ಎಚ್.ಡಿ ದೇವೇಗೌಡ 
ರಾಜಕೀಯ

ಬಿಜೆಪಿಗೆ ಅನುಕೂಲವಾಗುವಂತೆ ಸರ್ಕಾರ ಗ್ರಾಮಪಂಚಾಯತ್ ಮೀಸಲಾತಿ ಸಿದ್ದಪಡಿಸಿದೆ: ದೇವೇಗೌಡ

ಗ್ರಾಮ ಪಂಚಾಯತ್ ಚುನಾವಣೆಗಾಗಿ ಸರ್ಕಾರ ಸಿದ್ದಪಡಿಸಿರುವ ಮೀಸಲಾತಿ ಸಂಪೂರ್ಣ ರಾಜಕೀಯವಾಗಿದ್ದು ಮುಂದಿನ ದಿನಗಳಲ್ಲಿ ಜೆಡಿಎಸ್ ಇದರ ವಿರುದ್ಧ ಹೋರಾಟ ನಡೆಸುವುದು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಎಚ್ಚರಿಸಿದ್ದಾರೆ.

ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಗಾಗಿ ಸರ್ಕಾರ ಸಿದ್ದಪಡಿಸಿರುವ ಮೀಸಲಾತಿ ಸಂಪೂರ್ಣ ರಾಜಕೀಯವಾಗಿದ್ದು ಮುಂದಿನ ದಿನಗಳಲ್ಲಿ ಜೆಡಿಎಸ್ ಇದರ ವಿರುದ್ಧ ಹೋರಾಟ ನಡೆಸುವುದು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಎಚ್ಚರಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಜೆಡಿಎಸ್ ಮುಖಂಡರು ಮತ್ತು ಜಿಲ್ಲಾ ಹಾಗೂ ತಾಲೂಕು ಅಧ್ಯಕ್ಷರ ಜೊತೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು ಮೀಸಲಾತಿ ಪಟ್ಟಿ ವಿರುದ್ಧ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಜೆಡಿಎಸ್ ಸಿದ್ಧತೆ ನಡೆಸುತ್ತಿದ್ದು, ಚುನಾವಣಾ ಸಮಯದಲ್ಲಿ ಪಕ್ಷವನ್ನು ವ್ಯವಸ್ಥಿತ ರೀತಿಯಲ್ಲಿ ನಿರ್ಮಿಸಬೇಕೆಂದು ಅವರು ಆಗ್ರಹಿಸಿದರು. ಈಗಾಗಲೇ ಗ್ರಾಮ ಪಂಚಾಯತಿ ಮೀಸಲಾತಿ ಪಟ್ಟಿ ಬಿಡುಗಡೆಯಾಗಿದೆ, ಇದರ ವಿರುದ್ಧ ಹೋರಾಟ ನಡೆಸುವುದಾಗಿ ದೇವೇಗೌಡ ತಿಳಿಸಿದ್ದಾರೆ. 

ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ತಮ್ಮ ಅವಶ್ಯಕತೆಗೆ ಅನುಗುಣವಾಗಿ ಮೀಸಲಾತಿ ಪಟ್ಟಿ ಸಿದ್ದಮಾಡಿಕೊಂಡಿದೆ, ಜೆಡಿಎಸ್ ಮೇಲುಗೈ ಇರುವ ಪ್ರದೇಶಗಳಲ್ಲಿ ಮೀಸಲಾತಿ ಬದಲಾವಣೆ ಮಾಡಲಾಗಿದೆ ಎಂದು ಶಾಸಕ ಬಂಡೆಪ್ಪ ಕಾಶೆಂಪೂರ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT