ಸಾಂದರ್ಭಿಕ ಚಿತ್ರ 
ರಾಜಕೀಯ

ಶಿರಾ ಉಪ ಚುನಾವಣೆ:  ಅಭ್ಯರ್ಥಿ ಆಯ್ಕೆಗೆ ಕಸರತ್ತು; ಗರಿಗೆದರಿದ ರಾಜಕೀಯ ಚಟುವಟಿಕೆ

ಶಿರಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಚುನಾವಣಾ ಆಯೋಗ ಇನ್ನೂ ದಿನಾಂಕವನ್ನೇ ನಿಗದಿ ಪಡಿಸಿಲ್ಲ, ಆದರೆ ಕ್ಷೇತ್ರದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ತುಮಕೂರು: ಶಿರಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಚುನಾವಣಾ ಆಯೋಗ ಇನ್ನೂ ದಿನಾಂಕವನ್ನೇ ನಿಗದಿ ಪಡಿಸಿಲ್ಲ, ಆದರೆ ಕ್ಷೇತ್ರದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಎಲ್ಲ ರಾಜಕೀಯ ಪಕ್ಷಗಳು ಚುನಾವಣೆ ಕೆಲಸಗಳನ್ನು ಆರಂಭಿಸಿವೆ, ಬಿಜೆಪಿಗೆ ಇಲ್ಲಿ ಯಾವುದೇ ನೆಲೆ ಇಲ್ಲ, ಆದರೆ ಶಿರಾ ಕ್ಷೇತ್ರ, ಬಿಜೆಪಿ ಸಂಸದ ಆನೇಕಲ್ ನಾರಾಯಣ ಸ್ವಾಮಿ ಪ್ರತಿನಿಧಿಸುವ ಚಿತ್ರದುರ್ಗ ಲೋಕಸಭಾ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಬಿಜೆಪಿ ನಾಯಕರು ಶಿರಾದಲ್ಲಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಲು ಮುಂದಾಗಿದ್ದಾರೆ.

ಇದಕ್ಕೆ ಸಾಕ್ಷಿ ಎಂಬಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿ ಕುಮಾರ್ ಶಿರಾದಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ, ಜೊತೆಗೆ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ. 

ಇದರ ಜೊತೆಗೆ 2018ರ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಟಿಬಿ ಜಯಚಂದ್ರ ಕೂಡ ಬೀಡು ಬಿಟ್ಟು ಸಭೆಗಳನ್ನು ನಡೆಸುತ್ತಿದ್ದಾರೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶಾಸಕ ದಿವಂಗತ ಸತ್ಯನಾರಾಯಣ ಅವರ 21 ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತುಮಕೂರು ಲೋಕಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಸೋಲಿಸಲು ಪ್ರಮುಖ ಪಾತ್ರ ವಹಿಸಿದ್ದ ಕಾಂಗ್ರೆಸ್ ರೆಬೆಲ್ ನಾಯಕ ಕೆಎನ್ ರಾಜಣ್ಣ ಕೂಡ ಪ್ರಾಬಲ್ಯ ಸಾಬೀತು ಪಡಿಸಲು ಮತ್ತೊಮ್ಮೆ ಮುಂದಾಗಿದ್ದಾರೆ. ಅಹಿಂದ ನಾಯಕರು ಸಭೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ತಮ್ಮ ಸ್ನೇಹಿತ ಮೂಡಲಗಿರಿಯಪ್ಪ ಅವರ ಪುತ್ರ ಡಾ.ರಾಜೇಶ್ ಅವರಿಗೆ ಪಕ್ಷ ಟಿಕೆಟ್ ನೀಡಿದರೇ ಅವರು ಜೆಡಿಎಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುತ್ತಾರೆ ಎಂಬ ವದಂತಿಗಳಿಗೆ ಅವರು ನಾಂದಿ ಹಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT