ಜಮೀರ್-ಸುಧಾಕರ್ 
ರಾಜಕೀಯ

ಅಲ್ಪಸಂಖ್ಯಾತ ಅನ್ನೋದು ರಕ್ಷಣೆಯ ಟ್ಯಾಗಾ?: ಡಾ.ಕೆ ಸುಧಾಕರ್

ನಾನು ಅಲ್ಪಾಸಂಖ್ಯಾತ ಎಂಬ ಕಾರಣಕ್ಕೆ ಡ್ರಗ್‌ ವಿಚಾರದಲ್ಲಿ ಟಾರ್ಗೆಟ್‌ ಮಾಡಲಾಗಿದೆ ಎಂಬ ಜಮೀರ್ ಅಹಮದ್ ಹೇಳಿಕೆಗೆ ತಿರುಗೇಟು ನೀಡಿದ ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್‌, ಅಲ್ಪಸಂಖ್ಯಾತ ಅನ್ನೋದು ರಕ್ಷಣೆಯ ಟ್ಯಾಗಾ? ಅದೇನು ಅವರ ಐಡಿ ಕಾರ್ಡಾ? ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಪ್ರಶ್ನಿಸಿದರು. 

ಚಿಕ್ಕಬಳ್ಳಾಪುರ: ನಾನು ಅಲ್ಪಾಸಂಖ್ಯಾತ ಎಂಬ ಕಾರಣಕ್ಕೆ ಡ್ರಗ್‌ ವಿಚಾರದಲ್ಲಿ ಟಾರ್ಗೆಟ್‌ ಮಾಡಲಾಗಿದೆ ಎಂಬ ಜಮೀರ್ ಅಹಮದ್ ಹೇಳಿಕೆಗೆ ತಿರುಗೇಟು ನೀಡಿದ ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್‌, ಅಲ್ಪಸಂಖ್ಯಾತ ಅನ್ನೋದು ರಕ್ಷಣೆಯ ಟ್ಯಾಗಾ? ಅದೇನು ಅವರ ಐಡಿ ಕಾರ್ಡಾ? ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಪ್ರಶ್ನಿಸಿದರು. 

ನಗರದಲ್ಲಿಂದು ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಅಲ್ಪ ಸಂಖ್ಯಾತ ಎನ್ನೋದು ರಕ್ಷಣೆಯ ಟ್ಯಾಗ್ ಅಲ್ಲ. ಅದೇನು ಐಡಿನಾ? ನಾನು ನನ್ನ ಜಾತಿ ಹೇಳಿಕೊಂಡು ಐಡಿ ಇಟ್ಟುಕೊಳ್ಳಬೇಕಾ? ಡ್ರಗ್ ದಂಧೆಯಲ್ಲಿ ತಪ್ಪಿತಸ್ಥರು ಯಾವ ಜನಾಂಗ, ಜಾತಿಯವರೇ ಆಗಲಿ ಶ್ರೀಮಂತರೇ ಇರಲಿ, ಬಡವರೇ ಇರಲಿ ಪಕ್ಷಾತೀಯ ಹಾಗೂ ಜಾತ್ಯಾತೀತವಾಗಿ ಬಿಜೆಪಿ ಸರಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದರು.

ಡ್ರಗ್‌ ವಿಷಯವನ್ನು ಬಿಜೆಪಿ‌ ಸರಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಹಿಂದಿನ ಸರಕಾರ ಡ್ರಗ್ ಮಾಫಿಯಾ ವಿರುದ್ಧ ಏಕೆ ಕ್ರಮ ವಹಿಸಲಿಲ್ಲ ಎಂದು ಸಿದ್ದರಾಮಯ್ಯ ಅವರಿಗೆ ಪ್ರಶ್ನಿಸಿದರು.

ನಮ್ಮ ಸರಕಾರ ಡ್ರಗ್ ದಂಧೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. ಯಾರೇ ಪ್ರಭಾವಿ ವ್ಯಕ್ತಿ ಇದ ರಲ್ಲಿ ಭಾಗಿಯಾಗಿದ್ದರು ಮುಲಾಜಿಲ್ಲದೇ ಕ್ರಮ ವಹಿಸುತ್ತೇವೆ. ಈಗಾಗಲೇ ಮುಖ್ಯಮಂತ್ರಿ ಗಳು ಹಾಗೂ ಗೃಹಸಚಿ ವರು ದೊಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT