ಯಡಿಯೂರಪ್ಪ 
ರಾಜಕೀಯ

ನಾಳೆ ಸಿಎಂ ಯಡಿಯೂರಪ್ಪ ದೆಹಲಿಗೆ ಪ್ರಯಾಣ, ಸಂಪುಟ ವಿಸ್ತರಣೆ ಕುರಿತು ಚರ್ಚೆ ಸಾಧ್ಯತೆ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಚರ್ಚೆ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಳೆ (ಗುರುವಾರ) ದಿಢೀರ್ ದೆಹಲಿಗೆ ತೆರಳುತ್ತಿದ್ದಾರೆ.

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಚರ್ಚೆ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಳೆ (ಗುರುವಾರ) ದಿಢೀರ್ ದೆಹಲಿಗೆ ತೆರಳುತ್ತಿದ್ದಾರೆ.

ಯಡಿಯೂರಪ್ಪ ಅವರು ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಮುಖಾಮುಖಿ ಭೇಟಿಯಾಗಿ ಸಂಪುಟ ವಿಸ್ತರಣೆ ಸೇರಿದಂತೆ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಪ್ರವಾಹ ಪರಿಹಾರ ನಿರ್ವಹಣೆಗೆ ಸಿಎಂ ಕೇಂದ್ರದಿಂದ 8 ಸಾವಿರ ಕೋಟಿ ಅನುದಾನ ಕೋರಿದ್ದರು, ಆದರೆ ಕೇಂದ್ರ ಸರ್ಕಾರ ಅದರಲ್ಲಿ ಕೇವಲ ಶೇ.10 ರಷ್ಟು ಮಾತ್ರ ನೀಡಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಸಿಎಂ ಹೆಚ್ಚಿನ ಅನುದಾನ ಕೋರುವುದರ ಜೊತೆಗೆ ಕಳೆದ ವರ್ಷದಿಂದ ಉಂಟಾದ ಪ್ರವಾಹ ಹಾನಿಯ ಸಂಬಂಧವು  ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಸಿಎಂ ಯಡಿಯೂರಪ್ಪ ಅವರು ನಾಳೆ ಬೆಳಗ್ಗೆ ಕಲಬುರಗಿಗೆ ತೆರಳಲಿದ್ದು, ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಅವರು ಅಂದು ಸಂಜೆ ಕೇಂದ್ರದ ಕೆಲವು ಸಚಿವರನ್ನು ಭೇಟಿಯಾಗಲಿದ್ದಾರೆ.

ಶುಕ್ರವಾರ ಬೆಳಗ್ಗೆ 9ಕ್ಕೆ ಕರ್ನಾಟಕ ಭವನ-1 (ಕಾವೇರಿ) ಪುನರ್‌ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲಿದ್ದಾರೆ. ನಂತರ ಮತ್ತೆ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದಾರೆ. ಶನಿವಾರವೂ ಕೇಂದ್ರ ಸಚಿವರ ಭೇಟಿ ಕಾರ್ಯಕ್ರಮವಿದೆ. ಇದರ ಮಧ್ಯೆ ರಾಜ್ಯದ ಸಂಸದರೊಂದಿಗೆ ಸಭೆ ನಡೆಸಲು ಉದ್ದೇಶಿಸಿದ್ದಾರೆ. ಹಾಗೆಯೇ ಪ್ರಧಾನಿ ಮೋದಿ ಅವರ ಭೇಟಿಗೂ ಸಮಯ ಕೋರಿದ್ದಾರೆ. ಸೆ. 19ರಂದು ರಾತ್ರಿ ಸಿಎಂ ರಾಜ್ಯಕ್ಕೆ ವಾಪಸಾಗಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT