ರಂದೀಪ್ ಸುರ್ಜೆವಾಲಾ 
ರಾಜಕೀಯ

ಕೋವಿಡ್ ನಿಯಂತ್ರಣ ಮರೆತು ಸಂಪುಟ ವಿಸ್ತರಣೆಯತ್ತ ಯಡಿಯೂರಪ್ಪ ಗಮನ: ಸುರ್ಜೇವಾಲ ಟೀಕೆ

ಕೋವಿಡ್ ನಿಯಂತ್ರಣಕ್ಕೆ ಯೋಜನೆ ರೂಪಿಸದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಗಮನವನ್ನು ಕೇವಲ ಸಚಿವ ಸಂಪುಟ ವಿಸ್ತರಣೆಯತ್ತ ಹರಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ನೂತನ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದ್ದಾರೆ.

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಯೋಜನೆ ರೂಪಿಸದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಗಮನವನ್ನು ಕೇವಲ ಸಚಿವ ಸಂಪುಟ ವಿಸ್ತರಣೆಯತ್ತ ಹರಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ನೂತನ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದ್ದಾರೆ.

ಕರ್ನಾಟಕದಲ್ಲಿ ಕೊರೋನಾ ಸೋಂಕಿನ 2ನೇ ಅಲೆ ಕಾಲಿಟ್ಟಿರುವಾಗ, ಯಡಿಯೂರಪ್ಪ ನೇತೃತ್ವದ ಅಸಮರ್ಥ ಸರ್ಕಾರ ಜನರ ಸಂಕಷ್ಟಕ್ಕೆ ಪರಿಹಾರ ನೀಡುವ ಬದಲು ಕೇವಲ ಪಕ್ಷದ ಆಂತರಿಕ ಸಮಸ್ಯೆ, ಅಧಿಕಾರದ ಹಪಾಹಪಿ ಹಾಗೂ ಸಂಪುಟ ವಿಸ್ತರಣೆಯತ್ತ ಗಮನಹರಿಸಿದೆ ಎಂದು ವಾಗ್ದಾಳಿ ನಡೆಸಿದರು.

ಕರ್ನಾಟಕದಲ್ಲಿ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಯೋಜನೆಯನ್ನು ರೂಪಿಸಬೇಕಿತ್ತು. ಆದರೆ ಅಂತಹ ಯಾವುದೇ ಕ್ರಮಗಳನ್ನು ಕೈಗೊಳ್ಳದೇ ಯಡಿಯೂರಪ್ಪ ಕೇವಲ ತಮ್ಮ ಸಂಪುಟ ವಿಸ್ತರಣೆಯತ್ತ ಗಮನ ಹರಿಸಿರುವುದನ್ನು ನೋಡಿದರೆ ನಿಜಕ್ಕೂ ಈ ಸರ್ಕಾರಕ್ಕೆ ಜನರ ಮೇಲೆ ಕಾಳಜಿಯಾಗಲೀ, ಜನಾರೋಗ್ಯವಾಗಲಿ ಬೇಕಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ ಎಂದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೋವಿಡ್ ಪ್ರಕರಣಗಳ ಸಂಖ್ಯೆ 50 ಲಕ್ಷದ ಗಡಿ ದಾಟುವ ಮೂಲಕ ಭಾರತ ವಿಶ್ವದಲ್ಲಿ 2ನೇ ಸ್ಥಾನದಲ್ಲಿದೆ. ಅಲ್ಲದೇ ಕಳೆದ 10 ದಿನಗಳಿಂದ ಪ್ರತಿದಿನ ಸುಮಾರು 1 ಲಕ್ಷ ಪ್ರಕರಣಗಳು ದಾಖಲಾಗುತ್ತಿವೆ. ಕರ್ನಾಟಕದಲ್ಲಿ ಕೋವಿಡ್ ಸಂತ್ರಸ್ತರ ಸಂಖ್ಯೆ 5ಲಕ್ಷದ ಗಡಿ ದಾಟಿದೆ. ಕಳೆದ 10 ದಿನದಿಂದ ಪ್ರತಿದಿನ ಸುಮಾರು 10,000 ಪ್ರಕರಣಗಳು ಖಲಾಗುತ್ತಿವೆಯಾದರೂ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಯಾವುದೇ ಯೋಜನೆಯನ್ನು ರೂಪಿಸಿಲ್ಲ ಎಂದು ಆರೋಪಿಸಿದ್ದಾರೆ.

ಕೋವಿಡ್ ನಿಯಂತ್ರಣಕ್ಕೆ ಯೋಜನೆಯನ್ನು ರೂಪಿಸುವ ಬದಲು ದೇವರನ್ನು ದೂಷಿಸುತ್ತಿರುವುದು ಸರ್ಕಾರಗಳ ಅಸಹಾಯಕತೆಯನ್ನು ತೋರಿಸುತ್ತಿದೆ ಎಂದು ಸುರ್ಜೇವಾಲ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT