ರಾಜಕೀಯ

ಸಚಿವ ಸಂಪುಟದಲ್ಲಿ ಅಪಾರ ಪ್ರಮಾಣದ ಪ್ರಾದೇಶಿಕ ಅಸಮತೋಲನವಿದೆ: ರೇಣುಕಾಚಾರ್ಯ

Shilpa D

ದಾವಣಗೆರೆ: ಅಬಕಾರಿ ಸಚಿವನಾಗಿದ್ದಾಗ ನಾನು ತುಂಬಾ ಶ್ರಮ ವಹಿಸಿ ಕೆಲಸ ಮಾಡಿದ್ದೇನೆ, ಹೀಗಾಗಿ ಮುಂದಿನ ಸಂಪುಟ ವಿಸ್ತರಣೆಯಲ್ಲಿ ನನಗೆ ಸಚಿವ ಸ್ಥಾನ ಸಿಗಲಿದೆ ಎಂದು ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಸದ್ಯ ಅಸ್ಥಿತ್ವದಲ್ಲಿರುವ ಸಚಿವ ಸಂಪುಟದಲ್ಲಿ ಅಪಾರ ಪ್ರಮಾಣದ ಪ್ರಾದೇಶಿಕ ಅಸಮತೋಲನವಿದೆ, ಹೀಗಾಗಿ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಅದನ್ನು ಸರಿಪಡಿಸಬೇಕೆಂದು ಆಗ್ರಹಿಸಿದ್ದಾರೆ.

ದಾವಣಗೆರೆ ಜಿಲ್ಲೆಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗಬೇಕಾದ ಅವಶ್ಯಕತೆಯಿದೆ, ಇದರಿಂದ ಜಿಲ್ಲೆಯಲ್ಲಿ ಬಿಜೆಪಿ ಮತ್ತಷ್ಟು ಪ್ರಬಲವಾಗಲಿದೆ ಎಂದು ಹೇಳಿದ್ದಾರೆ. ಸಚಿವಾಕಾಂಕ್ಷಿಯಾಗಿರುವ ರೇಣುಕಾಚಾರ್ಯ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿ ವರಿಷ್ಠರಿಗೆ ಮನವಿ ಮಾಡಿ ಬಂದಿದ್ದಾರೆ.
 

SCROLL FOR NEXT