ರಾಜ್ಯಸಭೆ (ಸಂಗ್ರಹ ಚಿತ್ರ) 
ರಾಜಕೀಯ

ರೈತರಿಗಾಗಿ ಹೋರಾಡಲು ಹೆಮ್ಮೆ ಇದೆ: ಅಮಾನತುಗೊಂಡ ಸಂಸದ ಹುಸೇನ್ 

ರೈತರಿಗಾಗಿ ಹೋರಾಡುವುದಕ್ಕೆ ಹೆಮ್ಮೆ ಇದೆ ಎಂದು ರಾಜ್ಯಸಭೆಯ ಅಮಾನತುಗೊಂಡ ಸಂಸದ ಸಯೀದ್ ನಾಸಿರ್ ಹುಸೇನ್ ಹೇಳಿದ್ದಾರೆ. 

ಬೆಂಗಳೂರು: ರೈತರಿಗಾಗಿ ಹೋರಾಡುವುದಕ್ಕೆ ಹೆಮ್ಮೆ ಇದೆ ಎಂದು ರಾಜ್ಯಸಭೆಯ ಅಮಾನತುಗೊಂಡ ಸಂಸದ ಸಯೀದ್ ನಾಸಿರ್ ಹುಸೇನ್ ಹೇಳಿದ್ದಾರೆ. 

ರೈತರ ಹಕ್ಕುಗಳಿಗಾಗಿ ನಿಂತಿದ್ದಕ್ಕಾಗಿ ಯಾವುದೇ ವಿಷಾದವೂ ಇಲ್ಲ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿರುವ ಸಂಸದರು ತಿಳಿಸಿದ್ದಾರೆ. 

ರಾಜ್ಯಸಭೆಯಲ್ಲಿ ಕೃಷಿ ಸಂಬಂಧಿತ 2 ಮಸೂದೆಗಳಿಗೆ ಕೇಂದ್ರ ಸರ್ಕಾರ ಅಂಗೀಕಾರ ಪಡೆಯುವ ಸಂದರ್ಭದಲ್ಲಿ ರಾಜ್ಯಸಭೆ ಉಪಾಧ್ಯಕ್ಷರ ಪೀಠದ ಎದುರು ಪ್ರತಿಭಟನಡೆಸಿ, ಮೈಕ್ ಕಿತ್ತೆಸೆದು ರೂಲ್ ಬುಕ್ ಹರಿದು ದುರ್ವರ್ತನೆ ತೋರಿದ ಕಾರಣಕ್ಕಾಗಿ ಒಂದು ವಾರಗಳ ಕಾಲ ಅಮಾನತುಗೊಂಡ 8 ಸಂಸದರ ಪೈಕಿ ಹುಸೇನ್ ಕೂಡ ಒಬ್ಬರಾಗಿದ್ದಾರೆ. 

ರೈತರ ಒಳಿತಿಗಾಗಿ ಹೋರಾಟ ನಡೆಸುವುದರಲ್ಲಿ ಹೆಮ್ಮೆ ಇದೆ. ರೈತ ದೇಶದ ಅನ್ನದಾತ, ಬಿಜೆಪಿ ಸರ್ಕಾರ ಸದನದ ನಿಯಮಗಳನ್ನು ಗಾಳಿಗೆ ತೂರಿ ದಕ್ಕಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಎನ್ ಡಿಎ ಮಿತ್ರಪಕ್ಷಗಳೇ ಈ ಮಸೂದೆಯನ್ನು ವಿರೋಧಿಸುತ್ತಿದ್ದವು ಇಂತಹ ಪರಿಸ್ಥಿತಿಯಲ್ಲಿ ರಾಜ್ಯಸಭೆಯಲ್ಲಿ ಅವರಿಗೆ ಅಗತ್ಯ ಬಹುಮತ ಇಲ್ಲ ಎಂಬುದು ಬಿಜೆಪಿಗೆ ಗೊತ್ತಿತ್ತು, ಆದ್ದರಿಂದಲೇ ನಿಯಮಾವಳಿಗಳನ್ನು ಗಾಳಿಗೆ ತೂರಿ ಮಸೂದೆ ಅಂಗೀಕರಿಸಿದ್ದಾರೆ. ಚುನಾಯಿತ ಪ್ರತಿನಿಧಿಯಾಗಿ ಅತ್ಯಂತ ದುರ್ಬಲರ ಪರ ಧ್ವನಿ ಎತ್ತುವುದು ನನ್ನ ಕರ್ತವ್ಯ ಎಂದು ಹುಸೇನ್ ಹೇಳ್ದಿದಾರೆ. 

"ಅವರು ನನ್ನನ್ನು ಸಂಸತ್ ನಿಂದ ಹೊರಹಾಕಬಹುದು, ಆದರೆ ಸಂಸತ್ ಒಳಗೆ, ಹೊರಗೆ ನಾನು ರೈತರ ಪರ ನಿಲ್ಲುತ್ತೇನೆ ಎಂದು ಹುಸೇನ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT