ಅಧಿವೇಶನದಲ್ಲಿ ಸಿಎಂ ಯಡಿಯೂರಪ್ಪ 
ರಾಜಕೀಯ

ಕಾರ್ಯನಿರ್ವಾಹಕರು, ನ್ಯಾಯಾಂಗ ಅಧಿಕಾರಿಗಳ ವೇತನವನ್ನೂ ಕಡಿತಗೊಳಿಸಿ: ಸರ್ಕಾರಕ್ಕೆ ವಿಪಕ್ಷಗಳ ಆಗ್ರಹ

ಕೊರೋನಾ ಸಂಕಷ್ಟ ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿದೂಗಿಸಬೇಕಿರುವ ಕಾರಣ ಮುಖ್ಯಮಂತ್ರಿಯಾಗಿ ಸಚಿವರು, ಶಾಸಕರ ಶೇ.30ರಷ್ಟು ವೇತನ ಕಡಿತ ಮಾಡುವ ಸಂಬಂಧ ಸಂಬಳಗಳು, ನಿವೃತ್ತಿ ವೇತನ, ಭತ್ಯೆ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕ ಸೇರಿದಂತೆ ನಾಲ್ಕು ವಿಧೇಯಕಗಳನ್ನು ಅಂಗೀಕಲಿಸಲಾಗಿದ್ದು, 8 ವಿಧೇಯಕಗಳನ್ನು ಮಂಡಿಸಲಾಯಿತು. 

ಬೆಂಗಳೂರು: ಕೊರೋನಾ ಸಂಕಷ್ಟ ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿದೂಗಿಸಬೇಕಿರುವ ಕಾರಣ ಮುಖ್ಯಮಂತ್ರಿಯಾಗಿ ಸಚಿವರು, ಶಾಸಕರ ಶೇ.30ರಷ್ಟು ವೇತನ ಕಡಿತ ಮಾಡುವ ಸಂಬಂಧ ಸಂಬಳಗಳು, ನಿವೃತ್ತಿ ವೇತನ, ಭತ್ಯೆ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕ ಸೇರಿದಂತೆ ನಾಲ್ಕು ವಿಧೇಯಕಗಳನ್ನು ಅಂಗೀಕಲಿಸಲಾಗಿದ್ದು, 8 ವಿಧೇಯಕಗಳನ್ನು ಮಂಡಿಸಲಾಯಿತು. 

2020ನೆ ಸಾಲಿನ ಕರ್ನಾಟಕ ವಿಧಾನಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ತೆಗಳು ಹಾಗೂ ಕೆಲವು ಇತರ ಕಾನೂನು(ತಿದ್ದುಪಡಿ) ವಿಧೇಯಕದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡ ಜೆಡಿಎಸ್ ಹಿರಿಯ ಸದಸ್ಯ ಎ.ಟಿ.ರಾಮಸ್ವಾಮಿ ಅವರು, ನ್ಯಾಯಾಂಗ ಇಲಾಖೆಯಲ್ಲಿ ವೇತನ ಪರಿಷ್ಕರಣೆ ಮಾಡಿದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ಶಾಸಕಾಂಗದ ಒಪ್ಪಿಗೆ ಪಡೆಯದೇ ನ್ಯಾಯಾಂಗ ಅಧಿಕಾರಿಗಳು ತಮ್ಮ ವೇತನ ತಾವೇ ಹೆಚ್ಚಿಸಿಕೊಂಡಿದ್ದಾರೆ. ನಂತರ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿದೆ. ಅಧಇಕಾರಿಗಳಿಗೆ ಅಂತಹ ಅಧಿಕಾರ ಕೊಟ್ಟವರು ಯಾರು? ಸರ್ಕಾರ ಅಷ್ಟು ಬಲಹೀನವಾಯಿತಾ? ಎಂದು ಸರ್ಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡರು.

ಕೋವಿಡ್ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ಕರ್ನಾಟ ವಿಧಾನಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳು ಹಾಗೂ ಕೆಲವು ಇತರೆ ಕಾನೂನು ವಿಧೇಯಕ 2020ರ ಮೇಲಿನ ಚರ್ಚೆ ವೇಳೆ ಈ ವಿಚಾರ ಪ್ರಸ್ತಾಪಿಸಿ ರಾಮಸ್ವಾಮಿಯವರು, ಕೋವಿಟ್ ಹಿನ್ನೆಲೆಯಲ್ಲಿ ಚುನಾಯಿತ ಪ್ರತಿನಿಧಿಗಳ ವೇತನ, ಭತ್ಯೆ ಕಡಿತಕ್ಕೆ ನಮ್ಮ ಯಾವುದೇ ವಿರೋಧವಿಲ್ಲ. ಆದರೆ, ನ್ಯಾಯಾಂಗ ಅಧಿಕಾರಿಗಳೂ ಕೂಡ ಇಂತಹ ಸಂಕಷ್ಟದ ಸಂದರ್ಭದಲ್ಲಿ ಶಾಸನ ಸಭೆಯ ಒಪ್ಪಿಗೆಯನ್ನೂ ಪಡೆಯದೆ ತಮ್ಮ ವೇತನವನ್ನು ತಾವೇ ಹೆಚ್ಚಿಸಿಕೊಂಡಿದ್ದಾರೆ. ಆ ಬಳಿಕ ಸರ್ಕಾರ ಒಪ್ಪಿಗೆ ನೀಡಿದೆ. ಸರ್ಕಾರ ಅಷ್ಟು ಬಲ ಹೀನವಾಗಿವಾಗಿದೆಯಾ ಎಂದು ಪ್ರಶ್ನಿಸಿದ್ದಾರೆ. 

ಇದಕ್ಕೆ ಉತ್ತರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿಯವರು ಅಧಿಕಾರಿಗಳ ವೇತನ ಹೆಚ್ಚಳದ ಬಗ್ಗೆ ಸದ್ಯಕ್ಕೆ ಉತ್ತರ ಕೊಡುವ ಸ್ಥಿತಿಯಲ್ಲಿಲ್ಲ. ಈ ಬಗ್ಗೆ ಪೂರ್ಣ ಮಾಹಿತಿ ತರಿಸಿಕೊಂಡು ಸಭೆಗೆ ಉತ್ತರಿಸಲಾಗುತ್ತದೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT