ವಿಧಾನ ಸೌಧ 
ರಾಜಕೀಯ

ವಿಧಾನ ಪರಿಷತ್ ನಲ್ಲಿ ಕಾರ್ಮಿಕ ತಿದ್ದುಪಡಿ ವಿಧೇಯಕಕ್ಕೆ ಸೋಲು: ಸರ್ಕಾರಕ್ಕೆ ಮುಖಭಂಗ

ವಿಧಾನ ಪರಿಷತ್‌ನಲ್ಲಿ 'ಕರ್ನಾಟಕ ಕೈಗಾರಿಕೆ ವಿವಾದಗಳು ಹಾಗೂ ಇತರ ಕಾನೂನುಗಳ ತಿದ್ದುಪಡಿ ವಿಧೇಯಕ-2020'ಕ್ಕೆ ಸೋಲುಂಟಾಗಿ ಸರಕಾರಕ್ಕೆ ಮುಖಭಂಗ ಉಂಟಾಯಿತು

ಬೆಂಗಳೂರು: ವಿಧಾನ ಪರಿಷತ್‌ನಲ್ಲಿ 'ಕರ್ನಾಟಕ ಕೈಗಾರಿಕೆ ವಿವಾದಗಳು ಹಾಗೂ ಇತರ ಕಾನೂನುಗಳ ತಿದ್ದುಪಡಿ ವಿಧೇಯಕ-2020'ಕ್ಕೆ ಸೋಲುಂಟಾಗಿ ಸರಕಾರಕ್ಕೆ ಮುಖಭಂಗ ಉಂಟಾಯಿತು. ಮೇಲ್ಮನೆಯಲ್ಲಿ ಆಡಳಿತ ಪಕ್ಷಕ್ಕೆ ಬಹುಮತ ಇಲ್ಲ. ಇದನ್ನು ನಗದಾಗಿಸಿಕೊಳ್ಳಲು ಪ್ರತಿಪಕ್ಷಗಳು ಕಾರ್ಮಿಕರಿಗೆ ಸಂಬಂಧಿಸಿದ ಕಾನೂನುಗಳನ್ನು ಬದಲಿಸದಂತೆ ಆಗ್ರಹಿಸಿದವು.

ಬೇರೆ ವಿಧೇಯಕಗಳನ್ನು ಪಾಸ್‌ ಮಾಡಿಕೊಟ್ಟ ರೀತಿ ಈ ವಿಧೇಯಕದ ಅನುಮೋದನೆಗೆ ಸಹಕರಿಸುವಂತೆ ಆಡಳಿತ ಪಕ್ಷದ ಸದಸ್ಯರು ಕೋರಿದರು. ಆದರೆ ಪಟ್ಟು ಬಿಡದ ಪ್ರತಿಪಕ್ಷಗಳು ಕೆಲ ತಿದ್ದುಪಡಿಗಳನ್ನು ಮುಂದಿಟ್ಟವು. 

ವಿಧೇಯಕದ ಸಾಧಕ ಬಾಧಕಗಳ ಬಗ್ಗೆ ಪರಿಶೀಲಿಸಲು 'ಸೆಲೆಕ್ಟ್ ಕಮಿಟಿ'ಗೆ ವಹಿಸಲು ಪ್ರತಿಪಕ್ಷ ಒತ್ತಾಯಿಸಿತು. ಇದಕ್ಕೆ ಸಭಾನಾಯಕರು ಒಪ್ಪಲಿಲ್ಲ. ಕೊನೆಗೆ ಸಂಖ್ಯಾಬಲದಲ್ಲಿ ಹೆಚ್ಚು ಇದ್ದ ಕಾರಣ ಪ್ರತಿಪಕ್ಷ ಮತಕ್ಕೆ ಹಾಕುವಂತೆ ಆಗ್ರಹಿಸಿತು. ಇದಕ್ಕೆ ಒಪ್ಪಿದ ಸಭಾಪತಿಯವರು ಮತ ವಿಭಜನೆ ಪ್ರತಿಕ್ರಿಯೆ ಆರಂಭಿಸಿದರು. ವಿಧೇಯಕದ ಪರವಾಗಿ 14 ಹಾಗೂ ವಿರುದ್ಧವಾಗಿ 26 ಮತಗಳು ಬಂದವು. ಇದರಿಂದ ವಿಧೇಯಕ್ಕೆ 12 ಮತಗಳಿಂದ ಸೋಲುಂಟಾಯಿತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ