ಸುರ್ಜೇವಾಲ ಹಾಗೂ ಕಾಂಗ್ರೆಸ್ ನಾಯಕರು 
ರಾಜಕೀಯ

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ನಿಂದ ಸಹಿ ಸಂಗ್ರಹ: ಸುರ್ಜೇವಾಲಾ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳ ವಿರುದ್ಧ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳ ವಿರುದ್ಧ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.

ಕೆಪಿಸಿಸಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಕ್ಟೋಬರ್ 10 ರಂದು ರೈತ ಸಮಾವೇಶ ನಡೆಸಲಾಗುವುದು. ಅಕ್ಟೋಬರ್ 30ರೊಳಗೆ ಬಿಜೆಪಿ ನೀತಿ ವಿರುದ್ಧ ದೇಶಾದ್ಯಂತ ಜನರಿಂದ 2 ಕೋಟಿ ಸಹಿ ಸಂಗ್ರಹಿಸಿ ಅದನ್ನು ಎಐಸಿಸಿ ನಾಯಕಿ ಸೋನಿಯಾಗಾಂಧಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಮೋದಿ ಹಾಗೂ ಯಡಿಯೂರಪ್ಪ ರೈತರ ಪರ ಕಾಯ್ದೆ ಜಾರಿಗೆ ತರುತ್ತಿದ್ದೇವೆ ಎಂದು ಹೇಳುತ್ತಿದ್ದರಾದರೂ ದೇಶದ ಎಲ್ಲ ರಾಜ್ಯಗಳಲ್ಲಿ ರೈತರ ಪ್ರತಿಭಟನೆ ನಡೆಯುತ್ತಿವೆ. ಪ್ರಧಾನಿ ಮೋದಿ ದೇಶದ ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ಈ ಕಾಯ್ದೆ ಜಾರಿಯಾದರೆ ಕೇವಲ ಸಿರಿವಂತರಷ್ಟೇ ಭೂಮಿ ಖರೀದಿಸುತ್ತಾರೆ. ಆಗ ರೈತರು ಎಲ್ಲಿಗೆ ಹೋಗಬೇಕು. ರೈತರಿಗೆ ಬೆಂಬಲ ಬೆಲೆ ಕೊಡುತ್ತೇವೆಂದು ಮೋದಿ ಹಸಿಸುಳ್ಳು ಹೇಳುತ್ತಿದ್ದಾರೆ ಎಂದರು.

ಇದಕ್ಕು ಮುನ್ನ ರೈತರ ರಾಜ್ಯ ಬಂದ್‌ ಬೆಂಬಲಿಸಿ ಕನ್ನಡದಲ್ಲಿ ಟ್ವೀಟ್‌ ಮಾಡಿದ್ದ ಸುರ್ಜೇವಾಲ ಅವರು, ಮುಖ್ಯಮಂತ್ರಿ ಯಡಿಯೂರಪ್ಪನವರೇ ರೈತರ ಕರ್ನಾಟಕ ಬಂದ್ ಗೆ ನಿಷೇಧ ಹೇರುವ ಬದಲು, ನಿಮ್ಮ ರೈತ-ಕಾರ್ಮಿಕ ವಿರೋಧಿ ಮನಸ್ಥಿತಿಗೆ ನಿಷೇಧ ಹೇರಿ ಎಂದು ಒತ್ತಾಯಿಸಿದ್ದರು.

ರಾಜ್ಯವನ್ನೇ ಹರಾಜು ಹಾಕುವ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಿದ್ದಕ್ಕೆ ಜನರಲ್ಲಿ ಕ್ಷಮೆಯಾಚಿಸಿ ಅದನ್ನು ಹಿಂಪಡೆಯಿರಿ, ಎಪಿಎಂಸಿ ಕಾಯ್ದೆಗೆ ಮಾಡಿರುವ ಕೆಟ್ಟ ತಿದ್ದುಪಡಿ ರದ್ದುಮಾಡಿ ಎಂದು ಆಗ್ರಹಿಸಿದ್ದಾರೆ. ಅಲ್ಲದೆ ಇದು ನಿಮಗೆ ಅಗ್ನಿ ಪರೀಕ್ಷೆ! ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT