ಸಿದ್ದರಾಮಯ್ಯ 
ರಾಜಕೀಯ

ಬಾಬರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳ ಖುಲಾಸೆ ದುರದೃಷ್ಟಕರ: ಸಿದ್ದರಾಮಯ್ಯ

ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಂಯ್ಯ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಂಯ್ಯ ಪ್ರತಿಕ್ರಿಯಿಸಿದ್ದಾರೆ.

ನ್ಯಾಯಾಲಯ 2019ರ ಸುಪ್ರೀಮ್ ಕೋರ್ಟ್ ತೀರ್ಪು ಮತ್ತು ಸಂವಿಧಾನದ ಆಶಯಗಳನ್ನು ಗಮನಕ್ಕೆ ತೆಗೆದುಕೊಂಡ ಹಾಗೆ ಕಾಣುತ್ತಿಲ್ಲ. 'ಬಾಬರಿ ಮಸೀದಿ ಧ್ವಂಸ ನೆಲದ ಕಾನೂನಿಗೆ ವಿರುದ್ಧವಾದ ಕೃತ್ಯ' ಎಂದು 2019 ನವಂಬರ್ 9ರ ಸುಪ್ರೀಮ್ ಕೋರ್ಟ್ ತೀರ್ಪು ಹೇಳಿದೆ. ಈಗ ಸಿಬಿಐ ವಿಶೇಷ ನ್ಯಾಯಾಲಯ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಬಾಬರಿ ಮಸೀದಿ ಧ್ವಂಸ ಮಾಡಿದವರು ಯಾರೆಂಬ ಪ್ರಶ್ನೆ ಹಾಗೆಯೇ ಉಳಿದಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬಾಬರಿ ಮಸೀದಿ ಧ್ವಂಸ ಮಾಡಿದವರನ್ನು ಶಿಕ್ಷೆಗೊಳಪಡಿಸುವಂತೆ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಗಳು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹೌದು, ನಾನು ಜೀವಂತವಾಗಿದ್ದೇನೆ': ಅಮೆರಿಕದ ರಾಯಭಾರಿಯೊಂದಿಗಿರುವ ಹೊಸ ವಿಡಿಯೋ ಹಂಚಿಕೊಂಡ ಇಸ್ರೇಲ್ ಪ್ರಧಾನಿ!

ಇರಾನ್ ವಾರ್ನಿಂಗ್ ಬೆನ್ನಲ್ಲೇ 'ಕಚ್ಚಾ ತೈಲ' ಮತ್ತಷ್ಟು ದುಬಾರಿ! ಪ್ರತಿ ಬ್ಯಾರೆಲ್ ಗೆ 103 ಡಾಲರ್ ಏರಿಕೆ!

ಬೆಂಗಳೂರು: ಜೀವಂತ ತಂದೆಯನ್ನೇ ಗೋಣಿ ಚೀಲದಲ್ಲಿ ತುಂಬಿ ಕೊರಿಯರ್ ಗೆ ಯತ್ನಿಸಿದ ಮಹಿಳೆ!ಮುಂದೇನಾಯ್ತು? ಈ Video ನೋಡಿ...

UAE ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಕುರಿತು ಚರ್ಚೆ!

ನಿಮ್ಮ ಉದಾಸೀನ ಪ್ರವೃತಿಯಿಂದ ಸರ್ಕಾರಕ್ಕೆ ಮುಜುಗರ: ಸಚಿವರು-ಅಧಿಕಾರಿಗಳ ವಿರುದ್ಧ ಸಿಎಂ ಗರಂ, ಉತ್ತರಿಸುವಂತೆ ಖಡಕ್ ಸೂಚನೆ

SCROLL FOR NEXT