ಇವಿಎಂ 
ರಾಜಕೀಯ

ಶಿಕ್ಷಕರ ಕ್ಷೇತ್ರದ ಚುನಾವಣೆ: ನವೆಂಬರ್ 5 ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2020ಕ್ಕಾಗಿ ಚುನಾವಣಾ ಕಾರ್ಯಸೂಚಿಯನ್ನು ಕೇಂದ್ರ ಚುನಾವಣಾ ಆಯೋಗವು ನೀಡಿದ್ದು, ಚುನಾವಣಾ ಕ್ಷೇತ್ರದ ವ್ಯಾಪ್ತಿಯಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸೆಪ್ಟೆಂಬರ್ 29 ರಿಂದ ನವೆಂಬರ್ 05 ರವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ..

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2020ಕ್ಕಾಗಿ ಚುನಾವಣಾ ಕಾರ್ಯಸೂಚಿಯನ್ನು ಕೇಂದ್ರ ಚುನಾವಣಾ ಆಯೋಗವು ನೀಡಿದ್ದು, ಚುನಾವಣಾ ಕ್ಷೇತ್ರದ ವ್ಯಾಪ್ತಿಯಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸೆಪ್ಟೆಂಬರ್ 29 ರಿಂದ ನವೆಂಬರ್ 05 ರವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ನವೀನ್ ರಾಜ್ ಸಿಂಗ್ ತಿಳಿಸಿದ್ದಾರೆ.

ಚುನಾವಣಾ ಕಾರ್ಯಸೂಚಿಯಂತೆ ಅಕ್ಟೋಬರ್ 01, 2020 ರಂದು ಅಧಿಸೂಚನೆ ಹೊರಡಿಸಲಾಗುವುದು. ಅಕ್ಟೋಬರ್ 8, 2020 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅಕ್ಟೋಬರ್ 9, 2020ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದೆ.

ಉಮೇದುವಾರಿಕೆ ಹಿಂಪಡೆಯಲು ಅಕ್ಟೋಬರ್ 12, 2020 ರಂದು ಕೊನೆಯ ದಿನಾಂಕವಾಗಿದ್ದು, ಅಕ್ಟೋಬರ್ 28, 2020 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನದ ನಡೆಯಲಿದೆ. ನವೆಂಬರ್ 02, 2020ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದ್ದು, ಚುನಾವಣಾ ಕಾರ್ಯ ನವೆಂಬರ್ 5 ರಂದು ಮುಕ್ತಾಯಗೊಳ್ಳಲಿದೆ.

ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿಗಳ ವಯಸ್ಸು ಭಾರತೀಯ ಸಂವಿಧಾನದ ಅನುಚ್ಛೇದ 173(ಬಿ)ರನ್ವಯ 30 ವರ್ಷಗಳಿಗೆ ಕಡಿಮೆ ಇರಕೂಡದು ಮತ್ತು ಅವರು ಕರ್ನಾಟಕದ ಯಾವುದಾದರೊಂದು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿರಬೇಕು ಮತ್ತು ಅವರು ಯಾವುದೇ ಕಾನೂನಿನಡಿಯಲ್ಲಿ ಅನರ್ಹರಾಗಿರಬಾರದು. ಚಾಲ್ತಿಯಲ್ಲಿರುವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರುವ ಬಗ್ಗೆ ಸಂಬಂಧಿಸಿದ ಮತದಾರರ ನೋಂದಣಾಧಿಕಾರಿ/ಸಹಾಯಕ ಮತದಾರರ ನೋಂದಣಾಧಿಕಾರಿಗಳಿಂದ ಪಡೆದ ಮತದಾರರ ಪಟ್ಟಿಯ ದೃಢೀಕೃತ ನಕಲನ್ನು ಹಾಜರುಪಡಿಸಬೇಕು. 
ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತರಾಗಿರುವವರು ಮಾತ್ರ ಈ ಚುನಾವಣೆಯಲ್ಲಿ ಮತದಾರರಾಗಿರುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!

18 ಎಸೆತ, 38 ರನ್: ಜೂನಿಯರ್ Dravid ಅಬ್ಬರಕ್ಕೆ ಆಸಿಸ್ ತತ್ತರ; 7 ರನ್‌ಗಳಿಂದ ಗೆದ್ದ ಭಾರತ U-19 ತಂಡ

T20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ; 15,000 ರನ್‌ ಗಡಿ ದಾಟಿದ Jos Buttler; ಪೊಲಾರ್ಡ್ ದಾಖಲೆ ಧ್ವಂಸ!

ChatGPT ತಂದ ಸಾವು: "ಏನಾಗಲ್ಲ, ಈ ಮಿಶ್ರಣ ಸೇವಿಸು" ಎಂದಿದ್ದ OpenAI; ಮಾತು ನಂಬಿದ 19 ವರ್ಷದ ಯುವಕ ಸಾವು; ತಾಯಿಯ ರೋಧನೆ!