ಇವಿಎಂ 
ರಾಜಕೀಯ

ಶಿಕ್ಷಕರ ಕ್ಷೇತ್ರದ ಚುನಾವಣೆ: ನವೆಂಬರ್ 5 ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2020ಕ್ಕಾಗಿ ಚುನಾವಣಾ ಕಾರ್ಯಸೂಚಿಯನ್ನು ಕೇಂದ್ರ ಚುನಾವಣಾ ಆಯೋಗವು ನೀಡಿದ್ದು, ಚುನಾವಣಾ ಕ್ಷೇತ್ರದ ವ್ಯಾಪ್ತಿಯಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸೆಪ್ಟೆಂಬರ್ 29 ರಿಂದ ನವೆಂಬರ್ 05 ರವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ..

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2020ಕ್ಕಾಗಿ ಚುನಾವಣಾ ಕಾರ್ಯಸೂಚಿಯನ್ನು ಕೇಂದ್ರ ಚುನಾವಣಾ ಆಯೋಗವು ನೀಡಿದ್ದು, ಚುನಾವಣಾ ಕ್ಷೇತ್ರದ ವ್ಯಾಪ್ತಿಯಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸೆಪ್ಟೆಂಬರ್ 29 ರಿಂದ ನವೆಂಬರ್ 05 ರವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ನವೀನ್ ರಾಜ್ ಸಿಂಗ್ ತಿಳಿಸಿದ್ದಾರೆ.

ಚುನಾವಣಾ ಕಾರ್ಯಸೂಚಿಯಂತೆ ಅಕ್ಟೋಬರ್ 01, 2020 ರಂದು ಅಧಿಸೂಚನೆ ಹೊರಡಿಸಲಾಗುವುದು. ಅಕ್ಟೋಬರ್ 8, 2020 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅಕ್ಟೋಬರ್ 9, 2020ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದೆ.

ಉಮೇದುವಾರಿಕೆ ಹಿಂಪಡೆಯಲು ಅಕ್ಟೋಬರ್ 12, 2020 ರಂದು ಕೊನೆಯ ದಿನಾಂಕವಾಗಿದ್ದು, ಅಕ್ಟೋಬರ್ 28, 2020 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನದ ನಡೆಯಲಿದೆ. ನವೆಂಬರ್ 02, 2020ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದ್ದು, ಚುನಾವಣಾ ಕಾರ್ಯ ನವೆಂಬರ್ 5 ರಂದು ಮುಕ್ತಾಯಗೊಳ್ಳಲಿದೆ.

ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿಗಳ ವಯಸ್ಸು ಭಾರತೀಯ ಸಂವಿಧಾನದ ಅನುಚ್ಛೇದ 173(ಬಿ)ರನ್ವಯ 30 ವರ್ಷಗಳಿಗೆ ಕಡಿಮೆ ಇರಕೂಡದು ಮತ್ತು ಅವರು ಕರ್ನಾಟಕದ ಯಾವುದಾದರೊಂದು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿರಬೇಕು ಮತ್ತು ಅವರು ಯಾವುದೇ ಕಾನೂನಿನಡಿಯಲ್ಲಿ ಅನರ್ಹರಾಗಿರಬಾರದು. ಚಾಲ್ತಿಯಲ್ಲಿರುವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರುವ ಬಗ್ಗೆ ಸಂಬಂಧಿಸಿದ ಮತದಾರರ ನೋಂದಣಾಧಿಕಾರಿ/ಸಹಾಯಕ ಮತದಾರರ ನೋಂದಣಾಧಿಕಾರಿಗಳಿಂದ ಪಡೆದ ಮತದಾರರ ಪಟ್ಟಿಯ ದೃಢೀಕೃತ ನಕಲನ್ನು ಹಾಜರುಪಡಿಸಬೇಕು. 
ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತರಾಗಿರುವವರು ಮಾತ್ರ ಈ ಚುನಾವಣೆಯಲ್ಲಿ ಮತದಾರರಾಗಿರುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ

Bigg Boss ಖ್ಯಾತಿಯ Aravind KP- Divya uruduga ಬ್ರೇಕಪ್​!; ಜಾಲತಾಣದಲ್ಲಿ ಪರಸ್ಪರ Unfollow; ನಿಜವಾಯ್ತಾ ಜೋತಿಷ್ಯ?

ಆಂತರಿಕ ಅಸಮಾಧಾನ: ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ CM ಸಿಎಂ ಸಿದ್ದರಾಮಯ್ಯ ಗೈರಾಗಿದ್ದೇಕೆ?

ನೂತನ ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ; ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!