ಶುಭಂ ಶೆಲ್ಕೆ 
ರಾಜಕೀಯ

ಬೆಳಗಾವಿ ಲೋಕಸಭೆ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಿಗೆ ಎಂಇಎಸ್ ಸವಾಲು

ಏಪ್ರಿಲ್ 17 ರಂದು ನಡೆಯುವ ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿ ಹಣೆ ಬರಹವನ್ನು ಮಹಾರಾಷ್ಟ್ರ ಏಕೀಕರಣ ಸಮಿತಿ ನಿರ್ಧರಿಸಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬೆಳಗಾವಿ: ಏಪ್ರಿಲ್ 17 ರಂದು ನಡೆಯುವ ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿ ಹಣೆ ಬರಹವನ್ನು ಮಹಾರಾಷ್ಟ್ರ ಏಕೀಕರಣ ಸಮಿತಿ ನಿರ್ಧರಿಸಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಮಂಗಳಾ ಅಂಗಡಿ ಅವರನ್ನು ಕಣಕ್ಕಿಳಿಸಿದೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಯಮನಕರಡಿ ಶಾಸಕ ಸತೀಶ್ ಜಾರಕಿಹೊಳಿ ಕಣಕ್ಕಿಳಿದ ಮೇಲೆ ಚುನಾವಣೆಯ ಲೆಕ್ಕಾಚಾರವೇ ಬೇರೊಂದಾಗಿದೆ.

ಕಾಂಗ್ರೆಸ್ -ಬಿಜೆಪಿ ಅಭ್ಯರ್ಥಿಗಳಿಗೆ ಚಾಲೆಂಜ್ ಹಾಕಲು ಎಂಇಎಸ್ ಕೂಡ ಶುಭಂ ಶೆಲ್ಕೆ ಅವರನ್ನು ಕಣಕ್ಕಿಳಿಸಿದೆ. ಎಂಇಎಸ್ ಅಭ್ಯರ್ಥಿಗೆ ಮಹಾರಾಷ್ಚ್ರ ಪರ ಸಂಘಟನೆಗಳು ಬೆಂಬಲ ನೀಡಿವೆ, ಹೀಗಾಗಿ ಎರಡು ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ಆತಂಕಕ್ಕೀಡಾಗಿದ್ದಾರೆ.

ಆದರೆ ಕಳೆದ ಸಂಸತ್ ಚುನಾವಣೆಯ ಸಂದರ್ಭದಲ್ಲಿ ಅದೇ ವಿಭಾಗವು ಅದನ್ನು ಬೆಂಬಲಿಸಿದ್ದರಿಂದ ಇದು ಬಿಜೆಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಬಹುದು, ಏಕೆಂದರೆ ತಮ್ಮ ಹಿತಾಸಕ್ತಿಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಭಾವಿಸುವ ಮಹಾರಾಷ್ಟ್ರದವರಲ್ಲಿ ನಿರಾಶೆಯ ಭಾವವಿದೆ.

ಅದೇ ವಿಭಾಗವು ಕಾಂಗ್ರೆಸ್ ನ ಸಾಂಪ್ರದಾಯಿಕ ಬೆಂಬಲದ ನೆಲೆಯಾಗಿತ್ತು, ಇದು ಮೋದಿ ಅಲೆಯ ನಂತರ ಟ್ರ್ಯಾಕ್ ಅನ್ನು ಬದಲಾಯಿಸಿತು.

ಈ ಮೊದಲು ಮಹಾರಾಷ್ಟ್ರ ಪರ ಸಂಘಟನೆಗಳ ನಡುವೆ ಭಿನ್ನಾಭಿಪ್ರಾಯವಿತ್ತು, ಆದರೆ  ಎಲ್ಲವನ್ನು ಮರೆತು ಎಂಇಎಸ್ ಅಭ್ಯರ್ಥಿಗೆ ಬೆಂಬಲ ನೀಡಲಿದ್ದಾರೆ ಎಂದು ಎಂಇಎಸ್ ಮುಖಂಡ ಮನೋಹರ್ ಕಿಣೇಕರ್ ಹೇಳಿದ್ದಾರೆ.

ಈ ಕ್ಷೇತ್ರದಲ್ಲಿ 18 ಲಕ್ಷ ಮರಾಠಿಗರಿದ್ದಾರೆ. ಶೆಲ್ಕೆ ಬೆಳಗಾವಿ ಗ್ರಾಮೀಣ ಭಾಗದ ಕಡೆ ತಮ್ಮ ಗಮನ ಕೇಂದ್ರೀಕರಿಸಿದ್ದಾರೆ, ಉತ್ತರ, ದಕ್ಷಿಣ ವಿಧಾನ ಸಭೆ ಕ್ಷೇತ್ರಗಳಲ್ಲಿ ಸುಮಾರು 8 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT