ಶುಭಂ ಶೆಲ್ಕೆ 
ರಾಜಕೀಯ

ಬೆಳಗಾವಿ ಲೋಕಸಭೆ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಿಗೆ ಎಂಇಎಸ್ ಸವಾಲು

ಏಪ್ರಿಲ್ 17 ರಂದು ನಡೆಯುವ ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿ ಹಣೆ ಬರಹವನ್ನು ಮಹಾರಾಷ್ಟ್ರ ಏಕೀಕರಣ ಸಮಿತಿ ನಿರ್ಧರಿಸಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬೆಳಗಾವಿ: ಏಪ್ರಿಲ್ 17 ರಂದು ನಡೆಯುವ ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿ ಹಣೆ ಬರಹವನ್ನು ಮಹಾರಾಷ್ಟ್ರ ಏಕೀಕರಣ ಸಮಿತಿ ನಿರ್ಧರಿಸಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಮಂಗಳಾ ಅಂಗಡಿ ಅವರನ್ನು ಕಣಕ್ಕಿಳಿಸಿದೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಯಮನಕರಡಿ ಶಾಸಕ ಸತೀಶ್ ಜಾರಕಿಹೊಳಿ ಕಣಕ್ಕಿಳಿದ ಮೇಲೆ ಚುನಾವಣೆಯ ಲೆಕ್ಕಾಚಾರವೇ ಬೇರೊಂದಾಗಿದೆ.

ಕಾಂಗ್ರೆಸ್ -ಬಿಜೆಪಿ ಅಭ್ಯರ್ಥಿಗಳಿಗೆ ಚಾಲೆಂಜ್ ಹಾಕಲು ಎಂಇಎಸ್ ಕೂಡ ಶುಭಂ ಶೆಲ್ಕೆ ಅವರನ್ನು ಕಣಕ್ಕಿಳಿಸಿದೆ. ಎಂಇಎಸ್ ಅಭ್ಯರ್ಥಿಗೆ ಮಹಾರಾಷ್ಚ್ರ ಪರ ಸಂಘಟನೆಗಳು ಬೆಂಬಲ ನೀಡಿವೆ, ಹೀಗಾಗಿ ಎರಡು ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ಆತಂಕಕ್ಕೀಡಾಗಿದ್ದಾರೆ.

ಆದರೆ ಕಳೆದ ಸಂಸತ್ ಚುನಾವಣೆಯ ಸಂದರ್ಭದಲ್ಲಿ ಅದೇ ವಿಭಾಗವು ಅದನ್ನು ಬೆಂಬಲಿಸಿದ್ದರಿಂದ ಇದು ಬಿಜೆಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಬಹುದು, ಏಕೆಂದರೆ ತಮ್ಮ ಹಿತಾಸಕ್ತಿಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಭಾವಿಸುವ ಮಹಾರಾಷ್ಟ್ರದವರಲ್ಲಿ ನಿರಾಶೆಯ ಭಾವವಿದೆ.

ಅದೇ ವಿಭಾಗವು ಕಾಂಗ್ರೆಸ್ ನ ಸಾಂಪ್ರದಾಯಿಕ ಬೆಂಬಲದ ನೆಲೆಯಾಗಿತ್ತು, ಇದು ಮೋದಿ ಅಲೆಯ ನಂತರ ಟ್ರ್ಯಾಕ್ ಅನ್ನು ಬದಲಾಯಿಸಿತು.

ಈ ಮೊದಲು ಮಹಾರಾಷ್ಟ್ರ ಪರ ಸಂಘಟನೆಗಳ ನಡುವೆ ಭಿನ್ನಾಭಿಪ್ರಾಯವಿತ್ತು, ಆದರೆ  ಎಲ್ಲವನ್ನು ಮರೆತು ಎಂಇಎಸ್ ಅಭ್ಯರ್ಥಿಗೆ ಬೆಂಬಲ ನೀಡಲಿದ್ದಾರೆ ಎಂದು ಎಂಇಎಸ್ ಮುಖಂಡ ಮನೋಹರ್ ಕಿಣೇಕರ್ ಹೇಳಿದ್ದಾರೆ.

ಈ ಕ್ಷೇತ್ರದಲ್ಲಿ 18 ಲಕ್ಷ ಮರಾಠಿಗರಿದ್ದಾರೆ. ಶೆಲ್ಕೆ ಬೆಳಗಾವಿ ಗ್ರಾಮೀಣ ಭಾಗದ ಕಡೆ ತಮ್ಮ ಗಮನ ಕೇಂದ್ರೀಕರಿಸಿದ್ದಾರೆ, ಉತ್ತರ, ದಕ್ಷಿಣ ವಿಧಾನ ಸಭೆ ಕ್ಷೇತ್ರಗಳಲ್ಲಿ ಸುಮಾರು 8 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT