ಮಂಗಳಾ ಅಂಗಡಿ 
ರಾಜಕೀಯ

ಮಂಗಳಾ ಅಂಗಡಿ 4 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ: ಬಿಎಸ್'ವೈ ವಿಶ್ವಾಸ

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರು 4 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಬುಧವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರು 4 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಬುಧವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಭರ್ಜರಿ ಪ್ರಚಾರ ನಡೆಸಿದರು. ದಿನವಿಡೀ ಪಕ್ಷದ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸಿದ ಅವರು, ಗೋಕಾಕ್ ನಲ್ಲಿ ಬೃಹತ್ ಶೋ ನಡೆಸಿ ಮತ ಯಾಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಾಲ್ಕು ಲಕ್ಷ ಮತಗಳ ಅಂತದಿಂದ ಭರ್ಜರಿ ಗೆಲುವು ಸಾಧಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಈಗಾಗಲೇ ಕ್ಷೇತ್ರದಲ್ಲಿ ಬಿಜೆಪಿ ಪರ ಉತ್ತಮ ವಾತಾವರಣ ಇದೆ. ಬೆಳಗಾವಿ ಲೋಕಸಭೆಗೆ ಮೊದಲ ಬಾರಿ ಮಹಿಳೆಯೊಬ್ಬರಿಗೆ ಬಿಜೆಪಿಯಿಂದ ಟಿಕೆಟ್ ನೀಡಿದ್ದೇವೆ. ಗೋಕಾಕ ಮತ್ತು ಅರಭಾವಿಯಲ್ಲೂ ಪಕ್ಷದ ಪರ ಉತ್ತಮ ವಾತಾವರಣ ಇದೆ. ರಮೇಶ್ ಜಾರಕಿಹೊಳಿ ಸಹೋದರರು ಕೂಡ ಸ್ಪಂದಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಉತ್ಸಾಹದಿಂದ ಪ್ರಚಾರ ನಡೆಸುತ್ತಿದ್ದಾರೆಂದು ತಿಳಿಸಿದರು.

ಕಾಂಗ್ರೆಸ್ ಮುಳುಗುವ ಹಡಗು. ಆದರೆ, ನಾವು ಶಕ್ತಿ ಮೀರಿ ರಾಜ್ಯ ಅಭಿವೃದ್ಧಿ ಮಾಡುತ್ತಿದ್ದೇವೆ. ಬೆಳಗಾವಿಯನ್ನು ಮಾದರಿ ಜಿಲ್ಲೆಯಾಗಿಸಲು ಎಲ್ಲಾ ಕ್ರಮ ಕೈಗೊಳ್ಳುತ್ತೇವೆ. ಬಾಲಚಂದ್ರ ಜಾರಕಿಹೊಳಿ ಅವರು ಪ್ರಚಾರಕ್ಕೆ ಬಂದದ್ದು ನಮಗೆ ಆನೆ ಬಲಬಂದಂತಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel