ಡಿಕೆ ಸುರೇಶ್ ಮತ್ತು ಡಿಕೆ ಶಿವಕುಮಾರ್ 
ರಾಜಕೀಯ

'ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ?'

ವಲಸೆ ನಾಯಕ ಸಿದ್ದರಾಮಯ್ಯ ಅವರ ಬಣದೊಂದಿಗೆ ನೀವೂ ಸೇರಿಕೊಂಡು ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ? ಎಂದು ರಣದೀಪ್ ಸುರ್ಜೇವಾಲಾ ಗೆ ಬಿಜೆಪಿ ಟಾಂಗ್ ನೀಡಿದೆ.

ಬೆಂಗಳೂರು: ವಲಸೆ ನಾಯಕ ಸಿದ್ದರಾಮಯ್ಯ ಅವರ ಬಣದೊಂದಿಗೆ ನೀವೂ ಸೇರಿಕೊಂಡು ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ? ಎಂದು ರಣದೀಪ್ ಸುರ್ಜೇವಾಲಾ ಗೆ ಬಿಜೆಪಿ ಟಾಂಗ್ ನೀಡಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ  ಸಂಸದ ಡಿಕೆ ಸುರೇಶ್‌ ಸಾಮರ್ಥ್ಯದ ಮೇಲೆ ನಿಮಗೆ ಅನುಮಾನ ಬರಲು ಕಾರಣವೇನು? ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಪ್ರಶ್ನಿಸಿದೆ.

ಸತೀಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಗೆದ್ದು ಸಂಸದರಾದರೆ ಬಿಜೆಪಿ ಸಂಸದರಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದೆ ತಲೆಭಾಗಿ ಬೇಡುವುದಿಲ್ಲ ಎಂದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸುರ್ಜೇವಾಲ ಹೇಳಿಕೆ ನೀಡಿದ್ದರು.

ಇದಕ್ಕೆ ಟ್ವಿಟ್ಟರ್‌ನಲ್ಲಿ ಟಾಂಗ್ ನೀಡಿರುವ ಬಿಜೆಪಿ, ನಿಮ್ಮ ಮಾತಿನ ಪ್ರಕಾರ ಕನಕಪುರದ ಮಹಾನಾಯಕನ ಸಹೋದರ ಡಿಕೆ ಸುರೇಶ್ ಅಸಮರ್ಥರೇ!? ಡಿಕೆ ಸುರೇಶ್‌ ಅವರ ಸಾಮರ್ಥ್ಯದ ಮೇಲೆ ನಿಮಗೆ ಅನುಮಾನ ಬರಲು ಕಾರಣವೇನು? ಎಂದು ಲೇವಡಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT