ರಾಜಕೀಯ

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಬಿಜೆಪಿಯಿಂದ ಮಲ್ಲಿಕಾರ್ಜುನ ಖೂಬಾ ಉಚ್ಚಾಟನೆ

Raghavendra Adiga

ಬೀದರ್: ಇಂದು ನಡೆಯುತ್ತಿರುವ ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.

ಬಸವಕಲ್ಯಾಣದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಶರಣು ಸಲಗಾರ ಅವರ ವಿರುದ್ಧ ಪಕ್ಷೇತರರಾಗಿ ಕಣಕ್ಕಿಳಿದಿರುವ ಮಲ್ಲಿಕಾರ್ಜುನ ಖೂಬಾ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಕೇಸರಿ ಪಾಳಯ ಆದೇಶಿಸಿದೆ.

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದಡಿ ಖೂಬಾ ಅವರನ್ನು ಆರು ವರ್ಷ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. 

SCROLL FOR NEXT