ಮಾಜಿ ಶಾಸಕ ರಾಜು ಕಾಂಗ್ರೆಸ್ ಸೇರ್ಪಡೆ 
ರಾಜಕೀಯ

13 ತಿಂಗಳಿಂದ ಕೊರೋನಾ ಸೋಂಕು ನಿಯಂತ್ರಿಸಲು ಸರ್ಕಾರ ವಿಫಲ, ಜನರ ಜೀವದ ಜೊತೆ ಚೆಲ್ಲಾಟ: ಡಿಕೆ ಶಿವಕುಮಾರ್

ಕಳೆದ 13 ತಿಂಗಳಿಂದ ಸರ್ಕಾರ ಕೊರೋನಾ ನಿಯಂತ್ರಿಸಲು ವಿಫಲವಾಗಿದ್ದು, ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಬೆಂಗಳೂರು: ಕಳೆದ 13 ತಿಂಗಳಿಂದ ಸರ್ಕಾರ ಕೊರೋನಾ ನಿಯಂತ್ರಿಸಲು ವಿಫಲವಾಗಿದ್ದು, ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.

ರಾಮನಗರದ ಜೆಡಿಎಸ್‌ನ ಮಾಜಿ ಶಾಸಕ ಕೆ. ರಾಜು ಮತ್ತವರ ಬೆಂಬಲಿಗರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದ ನಂತರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ, ಜನರಿದ್ದರೇ ಮಾತ್ರ ಆರ್ಥಿಕತೆ, ಮೊದಲು ಜನರ ಜೀವ ಉಳಿಸುವ ಕೆಲಸ ಮಾಡಬೇಕಿದೆ ಎಂದಿದ್ದಾರೆ.

ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸಿ, ಆರೋಗ್ಯಕ್ಕೆ ಒತ್ತು ಕೊಡುವಂತೆ ಒತ್ತಾಯಿಸಿರುವ ಡಿ.ಕೆ ಶಿವಕುಮಾರ್ ಕೋವಿಡ್ ನಿಯಂತ್ರಣ ಚಿಕಿತ್ಸೆಗೆ 3೦೦ ಕೋಟಿ ಹಣ ಮೀಸಲಿಟ್ಟು, ಬೇರೆ ಇಲಾಖೆ ಅಧಿಕಾರಿಗಳನ್ನು ನಿಯಂತ್ರಣಕ್ಕೆ ಬಳಸಿಕೊಳ್ಳಿ. ಬರೀ ಸಭೆ ನಡೆಸಿದರೆ ಪ್ರಯೋಜನ ಇಲ್ಲ ಎಂದರು.

ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಿಸಲು ಸರ್ಕಾರಕ್ಕೆ ಒಂದು ವರ್ಷದಿಂದ ಸಹಕಾರ ಕೊಟ್ಟಿದ್ದೇವೆ, ಲಾಕ್‌ಡೌನ್ ಮಾಡಿದರು ಅದನ್ನು ಪಾಲಿಸಿದೆವು. ಚಪ್ಪಾಳೆ ಹೊಡಿಸಿದರು, ದೀಪ ಹಚ್ಚಿಸಿದರೂ ಎಲ್ಲ ಮಾಡಿದರೂ ಆರೋಗ್ಯ ಸಚಿವರು ಈಗ ಪರಿಸ್ಥಿತಿ ಕೈಮೀರಿದೆ ಎಂದು ಹೇಳುತ್ತಿದ್ದಾರೆ. ಸರ್ಕಾರ ಇದೆಯೋ ಇಲ್ಲವೋ ಗೊತ್ತಾಗುತ್ತಿಲ್ಲ ಎಂದು ಟೀಕಿಸಿದರು. ಲಾಕ್‌ಡೌನ್‌ಗೆ ನಮ್ಮ ವಿರೋಧವಿದೆ. ಲಾಕ್‌ಡೌನ್‌ನಿಂದ ಪ್ರಯೋಜನ ಇಲ್ಲ. ಜನರ ಜೀವದ ಜತೆಗೆ ಬದುಕು ಮುಖ್ಯ. ಹಾಗಾಗಿ ಲಾಕ್‌ಡೌನ್‌ಗೆ ನಮ್ಮ ವಿರೋಧವಿದೆ ಎಂದರು.

ಬೆಂಗಳೂರು ಜನಪ್ರತಿನಿಧಿಗಳ ಸಭೆಯಲ್ಲಿ ಕಾಂಗ್ರೆಸ್ ಶಾಸಕರು ಪಾಲ್ಗೊಳ್ಳುತ್ತಾರೆ ಅಲ್ಲಿ ಏನು ಹೇಳಬೇಕೋ ಅದನ್ನು ಹೇಳುತ್ತಾರೆ ಎಂದರು. ಸರ್ಕಾರಕ್ಕೆ ಕೊರೊನಾ ನಿಯಂತ್ರಣ ವಿಚಾರದಲ್ಲಿ ಸರಿಯಾದ ಯೋಜನೆ ಇಲ್ಲ. ಆಸ್ಪತ್ರೆಗಳಲ್ಲಿ ಹಾಸಿಗೆಗಳು ಸಿಗುತ್ತಿಲ್ಲ. ರೆಮಿಡಿಸಿವಿರ್ ಇಂಜೆಕ್ಷನ್ ಇಲ್ಲ, ದೇಶದಲ್ಲಿ ಹೆಚ್ಚು ಆಸ್ಪತ್ರೆ ಮತ್ತು ಹೆಚ್ಚು ತಜ್ಞ ವೈದ್ಯರು ರಾಜ್ಯದಲ್ಲಿದ್ದಾರೆ. ಆದರೂ ಸರ್ಕಾರ ಕೈಚೆಲ್ಲಿ ಕುಳಿತಿದೆ ಎಂದು ಟೀಕಿಸಿದರು. 21 ದಿನದಲ್ಲಿ ಕೊರೋನಾ ನಿಯಂತ್ರಣವಾಗುತ್ತದೆ ಎಂದು ಹೇಳಿದರು. ಆದರೆ ವರ್ಷ ಕಳೆದರು ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ಮುಂದೂಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ.ಇಂತಹ ಪರಿಸ್ಥಿತಿಯಲ್ಲಿ ಚುನಾವಣೆಗಳು ಬೇಕಾ ಎಂದು ಪ್ರಶ್ನಿಸಿರುವ ಅವರು, ಒಂದಾರು ತಿಂಗಳು ಚುನಾವಣೆ ಮುಂದೂಡುವಂತೆ ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT