ಸಿದ್ದರಾಮಯ್ಯ 
ರಾಜಕೀಯ

ಚುನಾಯಿತಾ ಸರ್ಕಾರವೋ, ಇಲ್ಲ ಹುಚ್ಚರ ಸಂತೆಯೋ? ಪೊಲೀಸರಿಗೆ ಲಾಠಿ ಕೊಟ್ಟು ಬೀದಿಗಿಳಿಸಿದರೆ ಕೊರೋನಾ ಓಡಿ ಹೋಗುತ್ತಾ?

ರಾಜ್ಯದಲ್ಲಿ ಚುನಾಯಿತ ಸರ್ಕಾರವಿದೇಯೋ ಇಲ್ಲ, ಹುಚ್ಚರ ಸಂತೆ ಇದೆಯೋ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ. ಕ್ಷಣಕ್ಕೊಂದು ನಿಯಮ, ಕ್ಷಣಕ್ಕೊಂದು ಮಾರ್ಗಸೂಚಿ ಹೊರಡಿಸಿ ಅಮಾಯಕ ಜನರ ಮೇಲೆ ದೌರ್ಜನ್ಯ ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಚುನಾಯಿತ ಸರ್ಕಾರವಿದೇಯೋ ಇಲ್ಲ, ಹುಚ್ಚರ ಸಂತೆ ಇದೆಯೋ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ. ಕ್ಷಣಕ್ಕೊಂದು ನಿಯಮ, ಕ್ಷಣಕ್ಕೊಂದು ಮಾರ್ಗಸೂಚಿ ಹೊರಡಿಸಿ ಅಮಾಯಕ ಜನರ ಮೇಲೆ ದೌರ್ಜನ್ಯ ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಆಡಳಿತ ನಡೆಸಲು ಆಗದಿದ್ದರೆ ಕುರ್ಚಿ ಬಿಟ್ಟು ತೊಲಗಿ, ಜನರನ್ನೇಕೆ ಗೋಳಾಡಿಸುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಸರ್ಕಾರದ ನಿಷ್ಕ್ರಿಯತೆ, ದುರಾಳಿತದಿಂದಲೇ ಕೊರೋನಾ ತೀವ್ರವಾಗಿ ಉಲ್ಬಣಿಸಿದೆ. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಪೊಲೀಸರ ಕೈಗೆ ಲಾಠಿ ಕೊಟ್ಟು ಬೀದಿಗಿಳಿಸಿದರೆ ಕೊರೋನಾ ಓಡಿ ಹೋಗುತ್ತಾ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಲಾಕ್​​ಡೌನ್​ ಇರಲಿ, ಕರ್ಫ್ಯೂ ಇರಲಿ ಜನರಿಗೆ ಮೊದಲು ಮನವರಿಕೆ ಮಾಡಿಕೊಡಿ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪೂರ್ವಸಿದ್ಧತೆಯೊಂದಿಗೆ ಮಾಡಿ. ತಟ್ಟೆ ಬಡಿಯುವ, ಕ್ಯಾಂಡಲ್​ ಹಚ್ಚುವ ತುಘಲಕ್​ ಆಡಳಿತವನ್ನು ಪುನರಾವರ್ತಿಸಬೇಡಿ ಎಂದು ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT